ಬೆಂಗಳೂರು, ವೈಟ್ಫೀಲ್ಡ್: ಮಗಳಿಗೋಸ್ಕರ ಹೆತ್ತ ತಂದೆ ಏನೂ ಮಾಡೋಕೂ ರೆಡಿ ಅನ್ನೋದಕ್ಕೆ ಸಾಕ್ಷಿಯಂತೆ ಗಂಭೀರ ಸ್ಥಿತಿಯಲ್ಲಿದ್ದ ಮಗಳನ್ನು ರಕ್ಷಿಸಲು ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಿದ್ದಾರೆ. ಮಗಳು ಅನುವಂಶೀಯದಿಂದ ಬರುವ ಬಹು-ಗುಳ್ಳೆ ಮೂತ್ರಪಿಂಡ ರೋಗ ( ADPKD)ದಿಂದ ಬಳಲುತ್ತಾ ಇದ್ದರು .ಇದರಿಂದ ಮೂತ್ರ ಪಿಂಡದ ವೈಫಲ್ಯವಾಗಿತ್ತು .
ಈ ಖಾಯಿಲೆ ಇವರ ಕುಟುಂಬಕ್ಕೆ ಹೊಸದೇನು ಅಲ್ಲ 2013ರಲ್ಲಿ, ಇದೇ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಪತ್ನಿಗೆ ಕಿಡ್ನಿ ದಾನ ಮಾಡಲು ಅವರು ಮುಂದೆ ಬಂದಿದ್ದರು. ಆದರೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಎದುರಿಸಿದ ತಾಂತ್ರಿಕ ಅಡಚಣೆಗಳ ಕಾರಣದಿಂದ ಆ ವೇಳೆ ಕಿಡ್ನಿ ಟ್ರಾನ್ಸ್ ಪ್ಲಾಟ್ ಮಾಡಲು ಸಾಧ್ಯವಾಗಿರಲಿಲ್ಲ.
ಈಗ ಆ ಸಮಸ್ಯೆ ಮತ್ತೆ ಮಗಳಿಗೆ ಸಂಭವಿಸಿದಾಗ, ಅವರ ಮೂತ್ರಪಿಂಡಗಳು ವೈಫಲ್ಯಗೊಂಡಾಗ, ತಂದೆಯವರು ಕ್ಷಣಮಾತ್ರವೂ ಯೋಚಿಸದೇ – ತಮ್ಮ ಏಕೈಕ ಮಗಳನ್ನು ಉಳಿಸಲು ಮತ್ತೆ ಮುಂದೆ ಬಂದರು.
61 ವರ್ಷದ ತಂದೆಗೆ ಮಧುಮೇಹ ಮತ್ತು ರಕ್ತದೊತ್ತಡ ತೊಂದರೆ ಇದ್ದರೂ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಸಮಗ್ರ ಪರೀಕ್ಷೆಯಲ್ಲಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಅಂಗ ಹಾನಿಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಬಹು ವಿಶಿಷ್ಟ ತಂಡ ನಡೆಸಿದ ವಿಮರ್ಶೆಯ ನಂತರ, ಅವರನ್ನು ಮಾರ್ಜಿನಲ್ ಡೋನರ್ ಎಂದು ಸ್ವೀಕರಿಸಲಾಯಿತು.
ಈ ಜೀವ ರಕ್ಷಕ ಶಸ್ತ್ರಚಿಕಿತ್ಸೆಯನ್ನುಡಾ. ಹರೀಶ ಬಾಬು ಕೆ – ಹಿರಿಯ ನೇಫ್ರಾಲಜಿಸ್ಟ್ ಮತ್ತು ಟ್ರಾನ್ಸ್ಪ್ಲಾಂಟ್ ತಜ್ಞ, ಡಾ. ಪ್ರಮೊದ್ – ಯೂರಾಲಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್ಪ್ಲಾಂಟ್ ತಜ್ಞ, ಡಾ. ದಿಲೀಪ್ – ಕಿಡ್ನಿ ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸಕ ಇವರ ತಂಡ ಯಶಸ್ವಿಯಾಗಿ ನೆರವೇರಿಸಿದರು.ದಾನ ಮಾಡಿದ ಕಿಡ್ನಿ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.
“ಸಮಗ್ರ ಮತ್ತು ನಿಖರವಾದ ವೈದ್ಯಕೀಯ ಮೌಲ್ಯಮಾಪನದ ಮೂಲಕ, ನಿಯಂತ್ರಣದಲ್ಲಿರುವ ಮಧುಮೇಹ ಮತ್ತು ರಕ್ತದೊತ್ತಡವಿದ್ದರೂ ಸಹ ಹಿರಿಯ ದಾನಿಗಳನ್ನುಸುರಕ್ಷಿತವಾಗಿ ಕಿಡ್ನಿ ದಾನಕ್ಕಾಗಿ ಪರಿಗಣಿಸಬಹುದು. ಇದು ಸೂಕ್ತ ದಾನಿಗಳ ಕೊರತೆಯಿಂದ ಬಳಲುವ ಅನೇಕ ಕುಟುಂಬಗಳಿಗೆ ಹೊಸ ಆಶಾಕಿರಣವಾಗಿದೆ,” ಎಂದು ಡಾ. ಹರೀಶ ಬಾಬು ಕೆ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…