ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ.

ಇದನ್ನು ಅತ್ಯಂತ ಅಪರೂಪದ ಅಪರಾಧ ಎಂದು ಕರೆದಿರುವ ನ್ಯಾಯಾಲಯ ಇದು ಅತ್ಯಂತ ಕ್ರೂರತೆ ಮತ್ತು ಅಧಿಕಾರ ದುರುಪಯೋಗವನ್ನು ಸಾಬೀತುಪಡಿಸುತ್ತದೆ. ಹೀಗಾಗಿ, ಆರೋಪಿಗಳಾದ ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದೆ.

ಚೆನ್ನೈ, ಏಪ್ರಿಲ್ 6: 2020ರಲ್ಲಿ ಕೊರೊನಾ (Covid-19) ಅವಧಿಯಲ್ಲಿ ರಾತ್ರಿಯಿಡೀ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಮಿಳುನಾಡಿನ (Tamil Nadu) ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಅಂಗಡಿ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಸಾಥನ್‌ಕುಲಂ ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಕಸ್ಟಡಿಯಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಿದ್ದರಿಂದ ಅವರಿಬ್ಬರೂ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮಗ್ರ ತನಿಖೆ ನಡೆಸಿ 2,427 ಪುಟಗಳ ಚಾರ್ಜ್‌ಶೀಟ್ ಅನ್ನು ಮಧುರೈ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅದರ ಆಧಾರದ ಮೇಲೆ ತಂದೆ-ಮಗನ ಲಾಕಪ್ ಡೆತ್ ಪ್ರಕರಣದಲ್ಲಿ ಬಂಧಿತರಾದ ಎಲ್ಲಾ 9 ಪೊಲೀಸರು ತಪ್ಪಿತಸ್ಥರೆಂದು ಕೋರ್ಟ್ ಘೋಷಿಸಿತ್ತು. ಇಂದು ಅವರ ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಎಲ್ಲ ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಘಟನೆ ನಡೆದು 6 ವರ್ಷಗಳ ವಿಚಾರಣೆಯ ನಂತರ ಇಂದು ತೀರ್ಪು ಹೊರಬಿದ್ದಿದೆ. ವ್ಯಾಪಾರಿ ಪಿ. ಜಯರಾಜ್ (59) ಮತ್ತು ಅವರ ಮಗ ಜೆ. ಬೆನ್ನಿಕ್ಸ್ (31) ಅವರ ಸಾವಿನ ಪ್ರಕರಣದಲ್ಲಿ ಕೊಲೆ ಮತ್ತು ಸಂಬಂಧಿತ ಅಪರಾಧಗಳಲ್ಲಿ 9 ಆರೋಪಿಗಳನ್ನು ತಪ್ಪಿತಸ್ಥರೆಂದು ನ್ಯಾಯಾಧೀಶ ಜಿ ಮುತ್ತುಕುಮಾರನ್ ತೀರ್ಪು ನೀಡಿದ್ದಾರೆ. ಕಸ್ಟಡಿಯಲ್ಲಿದ್ದಾಗ ಪೂರ್ವನಿಯೋಜಿತವಾಗಿ ಪ್ಲಾನ್ ಮಾಡಿ ರಾತ್ರಿಯಿಡೀ ಚಿತ್ರಹಿಂಸೆಯನ್ನು ನೀಡಲಾಗಿದೆ ಎಂಬ ಕೇಂದ್ರ ತನಿಖಾ ದಳದ (ಸಿಬಿಐ) ವಾದವನ್ನು ನ್ಯಾಯಾಲಯ ಸ್ವೀಕರಿಸಿದೆ. ಹೀಗಾಗಿ, ಗರಿಷ್ಠ ಶಿಕ್ಷೆಯನ್ನು ವಿಧಿಸಲಾಗಿದೆ.

ಗಲ್ಲು ಶಿಕ್ಷೆಗೊಳಗಾದವರಲ್ಲಿ ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಮದುರೈ, ಕಾನ್‌ಸ್ಟೆಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲಾದುರೈ, ಎಕ್ಸ್. ಥಾಮಸ್ ಫ್ರಾನ್ಸಿಸ್ ಮತ್ತು ಎಸ್. ವೇಲುಮುತ್ತು ಸೇರಿದ್ದಾರೆ. ಹತ್ತನೇ ಆರೋಪಿಯಾದ ವಿಶೇಷ ಸಬ್ ಇನ್ಸ್‌ಪೆಕ್ಟರ್ ಪೌಲ್ದುರೈ, ವಿಚಾರಣೆಯ ಸಮಯದಲ್ಲಿ ಕೊವಿಡ್​​-19ನಿಂದ ನಿಧನರಾಗಿದ್ದಾರೆ.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

12 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

22 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

22 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago