ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ.

ಇದನ್ನು ಅತ್ಯಂತ ಅಪರೂಪದ ಅಪರಾಧ ಎಂದು ಕರೆದಿರುವ ನ್ಯಾಯಾಲಯ ಇದು ಅತ್ಯಂತ ಕ್ರೂರತೆ ಮತ್ತು ಅಧಿಕಾರ ದುರುಪಯೋಗವನ್ನು ಸಾಬೀತುಪಡಿಸುತ್ತದೆ. ಹೀಗಾಗಿ, ಆರೋಪಿಗಳಾದ ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದೆ.

ಚೆನ್ನೈ, ಏಪ್ರಿಲ್ 6: 2020ರಲ್ಲಿ ಕೊರೊನಾ (Covid-19) ಅವಧಿಯಲ್ಲಿ ರಾತ್ರಿಯಿಡೀ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಮಿಳುನಾಡಿನ (Tamil Nadu) ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಅಂಗಡಿ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಸಾಥನ್‌ಕುಲಂ ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಕಸ್ಟಡಿಯಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಿದ್ದರಿಂದ ಅವರಿಬ್ಬರೂ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮಗ್ರ ತನಿಖೆ ನಡೆಸಿ 2,427 ಪುಟಗಳ ಚಾರ್ಜ್‌ಶೀಟ್ ಅನ್ನು ಮಧುರೈ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅದರ ಆಧಾರದ ಮೇಲೆ ತಂದೆ-ಮಗನ ಲಾಕಪ್ ಡೆತ್ ಪ್ರಕರಣದಲ್ಲಿ ಬಂಧಿತರಾದ ಎಲ್ಲಾ 9 ಪೊಲೀಸರು ತಪ್ಪಿತಸ್ಥರೆಂದು ಕೋರ್ಟ್ ಘೋಷಿಸಿತ್ತು. ಇಂದು ಅವರ ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಎಲ್ಲ ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಘಟನೆ ನಡೆದು 6 ವರ್ಷಗಳ ವಿಚಾರಣೆಯ ನಂತರ ಇಂದು ತೀರ್ಪು ಹೊರಬಿದ್ದಿದೆ. ವ್ಯಾಪಾರಿ ಪಿ. ಜಯರಾಜ್ (59) ಮತ್ತು ಅವರ ಮಗ ಜೆ. ಬೆನ್ನಿಕ್ಸ್ (31) ಅವರ ಸಾವಿನ ಪ್ರಕರಣದಲ್ಲಿ ಕೊಲೆ ಮತ್ತು ಸಂಬಂಧಿತ ಅಪರಾಧಗಳಲ್ಲಿ 9 ಆರೋಪಿಗಳನ್ನು ತಪ್ಪಿತಸ್ಥರೆಂದು ನ್ಯಾಯಾಧೀಶ ಜಿ ಮುತ್ತುಕುಮಾರನ್ ತೀರ್ಪು ನೀಡಿದ್ದಾರೆ. ಕಸ್ಟಡಿಯಲ್ಲಿದ್ದಾಗ ಪೂರ್ವನಿಯೋಜಿತವಾಗಿ ಪ್ಲಾನ್ ಮಾಡಿ ರಾತ್ರಿಯಿಡೀ ಚಿತ್ರಹಿಂಸೆಯನ್ನು ನೀಡಲಾಗಿದೆ ಎಂಬ ಕೇಂದ್ರ ತನಿಖಾ ದಳದ (ಸಿಬಿಐ) ವಾದವನ್ನು ನ್ಯಾಯಾಲಯ ಸ್ವೀಕರಿಸಿದೆ. ಹೀಗಾಗಿ, ಗರಿಷ್ಠ ಶಿಕ್ಷೆಯನ್ನು ವಿಧಿಸಲಾಗಿದೆ.

ಗಲ್ಲು ಶಿಕ್ಷೆಗೊಳಗಾದವರಲ್ಲಿ ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಮದುರೈ, ಕಾನ್‌ಸ್ಟೆಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲಾದುರೈ, ಎಕ್ಸ್. ಥಾಮಸ್ ಫ್ರಾನ್ಸಿಸ್ ಮತ್ತು ಎಸ್. ವೇಲುಮುತ್ತು ಸೇರಿದ್ದಾರೆ. ಹತ್ತನೇ ಆರೋಪಿಯಾದ ವಿಶೇಷ ಸಬ್ ಇನ್ಸ್‌ಪೆಕ್ಟರ್ ಪೌಲ್ದುರೈ, ವಿಚಾರಣೆಯ ಸಮಯದಲ್ಲಿ ಕೊವಿಡ್​​-19ನಿಂದ ನಿಧನರಾಗಿದ್ದಾರೆ.

Ramesh Babu

Journalist

Recent Posts

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

6 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

18 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

21 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

22 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 day ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 days ago