ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

 

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಿಷನ್ ಇಂದ್ರಧನುಷ್ 5.0 ಮತ್ತು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಸಾರ್ವಜನಿಕ ಸ್ಥಳಗಳಲ್ಲಿ,ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ, ಯಾರು ಪ್ರದರ್ಶಿಸುತ್ತಿಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕು ನಿಯಂತ್ರಣ ಕಾನೂನು- ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 04 ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ, ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು ಎಂದರು.

ಸೆಕ್ಷನ್ 05 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿ ಪತ್ರ, ಎಲ್ ಸಿ ಡಿ ಟಿವಿ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 06 ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 07 ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ. 85 ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ ಎಂದು ಹೇಳಿದರು.

ತಂಬಾಕು ವ್ಯಸನಿಗಳನ್ನು ಹೆಚ್ಚು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದರಲ್ಲದೆ, ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

2023ರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಅಂಗವಾಗಿ 5 ವರ್ಷದ ಒಳಗಿನ ಮಕ್ಕಳಿಗೆ, ಗರ್ಭಿಣಿಯರಿಗೆ ಲಸಿಕೆ ನೀಡಲಾಗುತ್ತದೆ. ಲಸಿಕಾಕರಣ ಕ್ಯಾಂಪ್ ಮಾಡುವ ಮುಂಚಿತವಾಗಿ ಹೆಚ್ಚು ಪ್ರಚಾರ ಮಾಡಿ, ಪ್ರತಿಯೊಬ್ಬ ಮಗುವಿಗೂ ಕೂಡ ಲಸಿಕೆಯನ್ನು ತಪ್ಪದೆ ನೀಡಿ. ಇದುವರೆಗೂ ಲಸಿಕೆ ಪಡೆಯದ, ಲಸಿಕೆ ಪಡೆಯಲು ಬಾಕಿ ಇರುವಂತಹ ಪ್ರದೇಶ, ವಲಸೆ ಪ್ರದೇಶಗಳಲ್ಲಿ, ನಗರದ ಸ್ಲಂ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಹೆಚ್ಚು ಲಸಿಕಾಕರಣ ಮಾಡಿ ಎಂದರು. ಶಿಕ್ಷಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

23 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago