ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

 

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಿಷನ್ ಇಂದ್ರಧನುಷ್ 5.0 ಮತ್ತು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಸಾರ್ವಜನಿಕ ಸ್ಥಳಗಳಲ್ಲಿ,ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ, ಯಾರು ಪ್ರದರ್ಶಿಸುತ್ತಿಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕು ನಿಯಂತ್ರಣ ಕಾನೂನು- ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 04 ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ, ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು ಎಂದರು.

ಸೆಕ್ಷನ್ 05 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿ ಪತ್ರ, ಎಲ್ ಸಿ ಡಿ ಟಿವಿ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 06 ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 07 ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ. 85 ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ ಎಂದು ಹೇಳಿದರು.

ತಂಬಾಕು ವ್ಯಸನಿಗಳನ್ನು ಹೆಚ್ಚು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದರಲ್ಲದೆ, ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

2023ರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಅಂಗವಾಗಿ 5 ವರ್ಷದ ಒಳಗಿನ ಮಕ್ಕಳಿಗೆ, ಗರ್ಭಿಣಿಯರಿಗೆ ಲಸಿಕೆ ನೀಡಲಾಗುತ್ತದೆ. ಲಸಿಕಾಕರಣ ಕ್ಯಾಂಪ್ ಮಾಡುವ ಮುಂಚಿತವಾಗಿ ಹೆಚ್ಚು ಪ್ರಚಾರ ಮಾಡಿ, ಪ್ರತಿಯೊಬ್ಬ ಮಗುವಿಗೂ ಕೂಡ ಲಸಿಕೆಯನ್ನು ತಪ್ಪದೆ ನೀಡಿ. ಇದುವರೆಗೂ ಲಸಿಕೆ ಪಡೆಯದ, ಲಸಿಕೆ ಪಡೆಯಲು ಬಾಕಿ ಇರುವಂತಹ ಪ್ರದೇಶ, ವಲಸೆ ಪ್ರದೇಶಗಳಲ್ಲಿ, ನಗರದ ಸ್ಲಂ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಹೆಚ್ಚು ಲಸಿಕಾಕರಣ ಮಾಡಿ ಎಂದರು. ಶಿಕ್ಷಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago