ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ, “ತಂಬಾಕು ಮುಕ್ತ ಯುವ ಅಂದೋಲನ”ವನ್ನು ಆಯೋಜಿಸಲಾಗಿತ್ತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಯುವಜನರನ್ನು ತಂಬಾಕುಮುಕ್ತ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬಿದಿಗಳಲ್ಲಿ ಜಾಥಾ ನಡೆಸಲಾಯಿತು.
ಆನಂತರ ಮನೆಮನೆ ಭೇಟಿ ನೀಡಿ ತಂಬಾಕಿನಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಾಹಿತಿ ತಿಳಿಸಿ, ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಿದರು. ಹಾಗೂ ಗ್ರಾಮದ ಯುವಕರು ತಂಬಾಕು ಸೇವನೆ ತ್ಯಜಿಸುವ ಪ್ರತಿಜ್ಞೆ ಮಾಡಿದರು.
ಶಾಲೆಗಳ ಸುತ್ತಮುತ್ತ ಮಾರಾಟ ನಿಷೇಧ ಜಾಗೃತಿಗಾಗಿ
ಗೋಡೆ ಬರಹ, ಬ್ಯಾನರ್, ಪೋಸ್ಟರ್ ಪ್ರದರ್ಶನ “ತಂಬಾಕು ಮುಕ್ತ ಹಳ್ಳಿ” ಸಂದೇಶವನ್ನು ಸಾರ್ವಜನಿಕ ತಿಳಿಸಿದರು.
ಈ ವೇಳೆ ಹಾದ್ರೀಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಂದಿನಿ, ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಯುವಕರು, ಹಿರಿಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷವೂ ಕೇವಲ ಹೆಣ್ಣು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ…
ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ವರ್ಷಾ(2)…
ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು…
ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ…
ಮೆಟ್ರೋ ಬೆಲೆ ಏರಿಕೆ.... " ನಾನು ಮೂರ್ಖ ಅಲ್ಲ " ಎರಡೂ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,…
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ…