ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ, “ತಂಬಾಕು ಮುಕ್ತ ಯುವ ಅಂದೋಲನ”ವನ್ನು ಆಯೋಜಿಸಲಾಗಿತ್ತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಯುವಜನರನ್ನು ತಂಬಾಕುಮುಕ್ತ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬಿದಿಗಳಲ್ಲಿ ಜಾಥಾ ನಡೆಸಲಾಯಿತು.
ಆನಂತರ ಮನೆಮನೆ ಭೇಟಿ ನೀಡಿ ತಂಬಾಕಿನಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಾಹಿತಿ ತಿಳಿಸಿ, ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಿದರು. ಹಾಗೂ ಗ್ರಾಮದ ಯುವಕರು ತಂಬಾಕು ಸೇವನೆ ತ್ಯಜಿಸುವ ಪ್ರತಿಜ್ಞೆ ಮಾಡಿದರು.
ಶಾಲೆಗಳ ಸುತ್ತಮುತ್ತ ಮಾರಾಟ ನಿಷೇಧ ಜಾಗೃತಿಗಾಗಿ
ಗೋಡೆ ಬರಹ, ಬ್ಯಾನರ್, ಪೋಸ್ಟರ್ ಪ್ರದರ್ಶನ “ತಂಬಾಕು ಮುಕ್ತ ಹಳ್ಳಿ” ಸಂದೇಶವನ್ನು ಸಾರ್ವಜನಿಕ ತಿಳಿಸಿದರು.
ಈ ವೇಳೆ ಹಾದ್ರೀಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಂದಿನಿ, ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಯುವಕರು, ಹಿರಿಯರು ಉಪಸ್ಥಿತರಿದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…