ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ, “ತಂಬಾಕು ಮುಕ್ತ ಯುವ ಅಂದೋಲನ”ವನ್ನು ಆಯೋಜಿಸಲಾಗಿತ್ತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಯುವಜನರನ್ನು ತಂಬಾಕುಮುಕ್ತ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬಿದಿಗಳಲ್ಲಿ ಜಾಥಾ ನಡೆಸಲಾಯಿತು.
ಆನಂತರ ಮನೆಮನೆ ಭೇಟಿ ನೀಡಿ ತಂಬಾಕಿನಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಾಹಿತಿ ತಿಳಿಸಿ, ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಿದರು. ಹಾಗೂ ಗ್ರಾಮದ ಯುವಕರು ತಂಬಾಕು ಸೇವನೆ ತ್ಯಜಿಸುವ ಪ್ರತಿಜ್ಞೆ ಮಾಡಿದರು.
ಶಾಲೆಗಳ ಸುತ್ತಮುತ್ತ ಮಾರಾಟ ನಿಷೇಧ ಜಾಗೃತಿಗಾಗಿ
ಗೋಡೆ ಬರಹ, ಬ್ಯಾನರ್, ಪೋಸ್ಟರ್ ಪ್ರದರ್ಶನ “ತಂಬಾಕು ಮುಕ್ತ ಹಳ್ಳಿ” ಸಂದೇಶವನ್ನು ಸಾರ್ವಜನಿಕ ತಿಳಿಸಿದರು.
ಈ ವೇಳೆ ಹಾದ್ರೀಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಂದಿನಿ, ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಯುವಕರು, ಹಿರಿಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…