ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ, “ತಂಬಾಕು ಮುಕ್ತ ಯುವ ಅಂದೋಲನ”ವನ್ನು ಆಯೋಜಿಸಲಾಗಿತ್ತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಯುವಜನರನ್ನು ತಂಬಾಕುಮುಕ್ತ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬಿದಿಗಳಲ್ಲಿ ಜಾಥಾ ನಡೆಸಲಾಯಿತು.
ಆನಂತರ ಮನೆಮನೆ ಭೇಟಿ ನೀಡಿ ತಂಬಾಕಿನಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಾಹಿತಿ ತಿಳಿಸಿ, ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಿದರು. ಹಾಗೂ ಗ್ರಾಮದ ಯುವಕರು ತಂಬಾಕು ಸೇವನೆ ತ್ಯಜಿಸುವ ಪ್ರತಿಜ್ಞೆ ಮಾಡಿದರು.
ಶಾಲೆಗಳ ಸುತ್ತಮುತ್ತ ಮಾರಾಟ ನಿಷೇಧ ಜಾಗೃತಿಗಾಗಿ
ಗೋಡೆ ಬರಹ, ಬ್ಯಾನರ್, ಪೋಸ್ಟರ್ ಪ್ರದರ್ಶನ “ತಂಬಾಕು ಮುಕ್ತ ಹಳ್ಳಿ” ಸಂದೇಶವನ್ನು ಸಾರ್ವಜನಿಕ ತಿಳಿಸಿದರು.
ಈ ವೇಳೆ ಹಾದ್ರೀಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಂದಿನಿ, ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಯುವಕರು, ಹಿರಿಯರು ಉಪಸ್ಥಿತರಿದ್ದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…