ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ, ಹಸುವಿನ ರುಂಡ-ಮುಂಡ ಬೇರ್ಪಡಿಸಿ ಅರೆಬರೆ ತಿಂದು ಪರಾರಿಯಾಗಿರುವ ಘಟನೆ ತಾಲೂಕಿನ ತಂಬೇನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ತಂಬೇನಹಳ್ಳಿ ಗ್ರಾಮದ ನಂಜಪ್ಪ ಎಂಬುವರಿಗೆ ಸೇರಿದ ಹಸು, ಚಿರತೆ ದಾಳಿಗೆ ಬಲಿಯಾಗಿದೆ. ಇಂದು ಬೆಳಗ್ಗೆ ಹಾಲು ಕರೆಯಲು ಕೊಟ್ಟಿಗೆಗೆ ಬಂದಾಗ ಹಸುವಿನ ರುಂಡ-ಮುಂಡ ಬೇರೆಯಾಗಿ ಬಿದ್ದಿದ್ದನ್ನು ರೈತ ನಂಜಪ್ಪ ಗಮನಿಸಿ ಗಾಬರಿಯಾಗಿದ್ದಾರೆ.
ಸುಮಾರು 20-25 ಸಾವಿರ ರೂಪಾಯಿ ಮೌಲ್ಯದ ಹಸು ಕಳೆದುಕೊಂಡ ರೈತ ನಂಜಪ್ಪ ಕಂಗಲಾಗಿದ್ದಾನೆ.
ಇತ್ತೀಚೆಗೆ ತಾಲೂಕಿನಲ್ಲಿ ಚಿರತೆಗಳ ಅಟ್ಟಹಾಸ ಮಿತಿಮೀರಿದ್ದು, ಚಿರತೆ ದಾಳಿಗೆ ಜಾನುವಾರುಗಳು ಬಲಿಯಾಗುತ್ತಲೇ ಇವೆ. ಕೂಡಲೇ ಚಿರತೆಗಳು ನಾಡಿಗೆ ಬರದಂತೆ ಎಚ್ಚರವಹಿಸಿ, ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…