ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಹಾಕಿದ ಡಿಸಿಎಂ ಡಿಕೆಶಿ: ಕೆಲವು ರಸ್ತೆಗಳಲ್ಲಿ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರ್ ಗುಣಮಟ್ಟ ಪರಿಶೀಲನೆ: ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ- ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸಲು ಬಂದಿದ್ದೇನೆ- ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.

ಬೆಂಗಳೂರು ನಗರದ PES ಕಾಲೇಜಿನ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿ ಸೇರಿದಂತೆ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕೆಲವು ರಸ್ತೆಗಳಲ್ಲಿ ತಾವೇ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರನ್ನು ಪರಿಶೀಲಿಸಿದರು. ಈ ಮೂಲಕ ಖುದ್ದು ರಸ್ತೆಯ ಗುಂಡಿ ಮುಚ್ಚಿರುವ ಗುಣಮಟ್ಟವನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಂಡರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago