ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಹಾಕಿದ ಡಿಸಿಎಂ ಡಿಕೆಶಿ: ಕೆಲವು ರಸ್ತೆಗಳಲ್ಲಿ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರ್ ಗುಣಮಟ್ಟ ಪರಿಶೀಲನೆ: ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ- ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸಲು ಬಂದಿದ್ದೇನೆ- ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.

ಬೆಂಗಳೂರು ನಗರದ PES ಕಾಲೇಜಿನ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿ ಸೇರಿದಂತೆ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕೆಲವು ರಸ್ತೆಗಳಲ್ಲಿ ತಾವೇ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರನ್ನು ಪರಿಶೀಲಿಸಿದರು. ಈ ಮೂಲಕ ಖುದ್ದು ರಸ್ತೆಯ ಗುಂಡಿ ಮುಚ್ಚಿರುವ ಗುಣಮಟ್ಟವನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಂಡರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

3 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

5 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

16 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

18 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

18 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago