ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.
ಬೆಂಗಳೂರು ನಗರದ PES ಕಾಲೇಜಿನ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿ ಸೇರಿದಂತೆ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಅಧಿಕಾರಿಗಳಿಗೆ ತಿಳಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…