ತಡರಾತ್ರಿ ಒಂಟಿ ಮನೆ ಗುರಿಯಾಗಿಸಿ ಕಳವು ಯತ್ನ: ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ಘಟನೆ

ತಡರಾತ್ರಿ ಒಂಟಿ ಮನೆ ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಯತ್ನಿಸಿರುವ ಖದೀಮರು. ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಮುನಿಯಪ್ಪ ಮತ್ತು ರಾಮಕೃಷ್ಣ ಎಂಬುವವರ ತೋಟದ ಮನೆಯಲ್ಲಿ ಘಟನೆ.

ಮನೆಯ ಮಾಲೀಕರು ತಡರಾತ್ರಿ ಸುಮಾರು 8ಗಂಟೆ ಸಮಯದಲ್ಲಿ ನಾಯಿಗಳಿಗೆ ಊಟ ತರಲು ಎರಡು ಕಿಲೋಮೀಟರ್ ದೂರದ ಕೆಳಗಿನಜೂಗಾನಹಳ್ಳಿಗೆ ಹೋಗಿದ್ದಾರೆ. ಇದನ್ನು ಬಂಡವಾಳ ಮಾಡಿಕೊಂಡು ಸೈಜ್ ಕಲ್ಲುಗಳಿಂದ ಬಾಗಿಲುಗಳಿಗೆ ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ.

ಮನೆಯ ಬಳಿ ನಾಲ್ಕು ನಾಯಿಗಳನ್ನು ಸಾಕಲಾಗಿದ್ದು, ಅವುಗಳನ್ನು ಹೊಡೆದು ಪ್ರಾಣಿ ಹಿಂಸೆ ಮಾಡಿ ಅಮಾನವೀಯತೆ ಮೆರೆದಿದ್ದಾರೆ.

ಈ ವೇಳೆ ಮಾತನಾಡಿದ ಮುನಿಯಪ್ಪ, ನಾವು ಸುಮಾರು 35 ವರ್ಷಗಳಿಂದ ಇಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇವೆ. ಇತ್ತೀಚೆಗೆ ಬೋರ್ ಹಾಕಿಸಿ ಮನೆ ಕಟ್ಟಿ ಇಲ್ಲೇ ವಾಸ ಮಾಡುತ್ತಿದ್ದೇವೆ. ಯಾವತ್ತೂ ಇಂತಹ ಘಟನೆ ನಡೆದಿರಲಿಲ್ಲ. ತಡರಾತ್ರಿ ಮನೆಯಲ್ಲಿ ನಾವು ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಬಂದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಯಾರೋ ಗೊತ್ತಿರುವವರೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago