ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.
ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…