ತಡೆಗೋಡೆ ಕಟ್ಟಲು ಪಕ್ಕದ ಮನೆಯವನಿಂದ ಅಡ್ಡಗಾಲು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ

ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.

ಕೃಷ್ಣಮೂರ್ತಿಯವರು ತಮ್ಮ 10 ಗುಂಟೆ ಜಾಗಕ್ಕೆ ಕೌಂಪೌಂಡ್ ನಿರ್ಮಿಸಲು ತಿರ್ಮಾನ ಮಾಡಿದ್ದರು. ಕೌಂಪೌಂಡ್ ನಿರ್ಮಾಣಕ್ಕೆ ಬೇಕಾದ ಹಾಲೋ ಬ್ರಿಕ್ಸ್ ಮತ್ತು ಎಂ.ಸಾಂಡ್ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಬೇಕಾದ ವಸ್ತುಗಳ ಸರಬರಾಜು ಮಾಡಲು ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ ಗುತ್ತಿಗೆ ನೀಡಿದ್ದರು. ಒಪ್ಪಂದದ ಮೇರೆಗೆ  ಕೃಷ್ಣಮೂರ್ತಿ ಮತ್ತು ಆನಂದ್ ಅವರು ನವೆಂಬರ್ 1 ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಟ್ರ್ಯಾಕ್ಟರ್ ನಲ್ಲಿ ಎಂ ಸಾಂಡ್ ಸುರಿಯಲು ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಮನೆಯವರಾದ ಮುನಿಯಪ್ಪ, ಹೆಂಡತಿ ಲಕ್ಷ್ಮಮ್ಮ ಹಾಗೂ ಮಗ ಅಶ್ವಥ್ ಆ ಕೆಲಸವನ್ನ ತಡೆದಿದ್ದಾರೆ ಎನ್ನಲಾಗಿದೆ.

ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪ ಕುರಿತು ಮುನಿಯಪ್ಪರನ್ನ ಕೇಳಿದ್ದಾಗ, ಕೃಷ್ಣಮೂರ್ತಿಯವರ ಆರೋಪವನ್ನ ಅಲ್ಲಗೆಳೆಯುತ್ತಾರೆ, ಆದರೆ ಮೊಬೈಲ್ ವಿಡಿಯೋದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರೋದು ಮತ್ತು ಜೀವ ಬೆದರಿಕೆಯ ದೃಶ್ಯ ದಾಖಲಾಗಿದೆ.

ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

4 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

5 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

9 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

10 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

10 hours ago