ತಡೆಗೋಡೆ ಕಟ್ಟಲು ಪಕ್ಕದ ಮನೆಯವನಿಂದ ಅಡ್ಡಗಾಲು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ

ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.

ಕೃಷ್ಣಮೂರ್ತಿಯವರು ತಮ್ಮ 10 ಗುಂಟೆ ಜಾಗಕ್ಕೆ ಕೌಂಪೌಂಡ್ ನಿರ್ಮಿಸಲು ತಿರ್ಮಾನ ಮಾಡಿದ್ದರು. ಕೌಂಪೌಂಡ್ ನಿರ್ಮಾಣಕ್ಕೆ ಬೇಕಾದ ಹಾಲೋ ಬ್ರಿಕ್ಸ್ ಮತ್ತು ಎಂ.ಸಾಂಡ್ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಬೇಕಾದ ವಸ್ತುಗಳ ಸರಬರಾಜು ಮಾಡಲು ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ ಗುತ್ತಿಗೆ ನೀಡಿದ್ದರು. ಒಪ್ಪಂದದ ಮೇರೆಗೆ  ಕೃಷ್ಣಮೂರ್ತಿ ಮತ್ತು ಆನಂದ್ ಅವರು ನವೆಂಬರ್ 1 ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಟ್ರ್ಯಾಕ್ಟರ್ ನಲ್ಲಿ ಎಂ ಸಾಂಡ್ ಸುರಿಯಲು ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಮನೆಯವರಾದ ಮುನಿಯಪ್ಪ, ಹೆಂಡತಿ ಲಕ್ಷ್ಮಮ್ಮ ಹಾಗೂ ಮಗ ಅಶ್ವಥ್ ಆ ಕೆಲಸವನ್ನ ತಡೆದಿದ್ದಾರೆ ಎನ್ನಲಾಗಿದೆ.

ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪ ಕುರಿತು ಮುನಿಯಪ್ಪರನ್ನ ಕೇಳಿದ್ದಾಗ, ಕೃಷ್ಣಮೂರ್ತಿಯವರ ಆರೋಪವನ್ನ ಅಲ್ಲಗೆಳೆಯುತ್ತಾರೆ, ಆದರೆ ಮೊಬೈಲ್ ವಿಡಿಯೋದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರೋದು ಮತ್ತು ಜೀವ ಬೆದರಿಕೆಯ ದೃಶ್ಯ ದಾಖಲಾಗಿದೆ.

ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

2 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

6 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

21 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

22 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago