ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.
ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…