ತಡೆಗೋಡೆ ಕಟ್ಟಲು ಪಕ್ಕದ ಮನೆಯವನಿಂದ ಅಡ್ಡಗಾಲು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ

ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.

ಕೃಷ್ಣಮೂರ್ತಿಯವರು ತಮ್ಮ 10 ಗುಂಟೆ ಜಾಗಕ್ಕೆ ಕೌಂಪೌಂಡ್ ನಿರ್ಮಿಸಲು ತಿರ್ಮಾನ ಮಾಡಿದ್ದರು. ಕೌಂಪೌಂಡ್ ನಿರ್ಮಾಣಕ್ಕೆ ಬೇಕಾದ ಹಾಲೋ ಬ್ರಿಕ್ಸ್ ಮತ್ತು ಎಂ.ಸಾಂಡ್ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಬೇಕಾದ ವಸ್ತುಗಳ ಸರಬರಾಜು ಮಾಡಲು ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ ಗುತ್ತಿಗೆ ನೀಡಿದ್ದರು. ಒಪ್ಪಂದದ ಮೇರೆಗೆ  ಕೃಷ್ಣಮೂರ್ತಿ ಮತ್ತು ಆನಂದ್ ಅವರು ನವೆಂಬರ್ 1 ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಟ್ರ್ಯಾಕ್ಟರ್ ನಲ್ಲಿ ಎಂ ಸಾಂಡ್ ಸುರಿಯಲು ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಮನೆಯವರಾದ ಮುನಿಯಪ್ಪ, ಹೆಂಡತಿ ಲಕ್ಷ್ಮಮ್ಮ ಹಾಗೂ ಮಗ ಅಶ್ವಥ್ ಆ ಕೆಲಸವನ್ನ ತಡೆದಿದ್ದಾರೆ ಎನ್ನಲಾಗಿದೆ.

ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪ ಕುರಿತು ಮುನಿಯಪ್ಪರನ್ನ ಕೇಳಿದ್ದಾಗ, ಕೃಷ್ಣಮೂರ್ತಿಯವರ ಆರೋಪವನ್ನ ಅಲ್ಲಗೆಳೆಯುತ್ತಾರೆ, ಆದರೆ ಮೊಬೈಲ್ ವಿಡಿಯೋದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರೋದು ಮತ್ತು ಜೀವ ಬೆದರಿಕೆಯ ದೃಶ್ಯ ದಾಖಲಾಗಿದೆ.

ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

2 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

22 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago