ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.
ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…