ತಡೆಗೋಡೆ ಕಟ್ಟಲು ಪಕ್ಕದ ಮನೆಯವನಿಂದ ಅಡ್ಡಗಾಲು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ

ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.

ಕೃಷ್ಣಮೂರ್ತಿಯವರು ತಮ್ಮ 10 ಗುಂಟೆ ಜಾಗಕ್ಕೆ ಕೌಂಪೌಂಡ್ ನಿರ್ಮಿಸಲು ತಿರ್ಮಾನ ಮಾಡಿದ್ದರು. ಕೌಂಪೌಂಡ್ ನಿರ್ಮಾಣಕ್ಕೆ ಬೇಕಾದ ಹಾಲೋ ಬ್ರಿಕ್ಸ್ ಮತ್ತು ಎಂ.ಸಾಂಡ್ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಬೇಕಾದ ವಸ್ತುಗಳ ಸರಬರಾಜು ಮಾಡಲು ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ ಗುತ್ತಿಗೆ ನೀಡಿದ್ದರು. ಒಪ್ಪಂದದ ಮೇರೆಗೆ  ಕೃಷ್ಣಮೂರ್ತಿ ಮತ್ತು ಆನಂದ್ ಅವರು ನವೆಂಬರ್ 1 ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಟ್ರ್ಯಾಕ್ಟರ್ ನಲ್ಲಿ ಎಂ ಸಾಂಡ್ ಸುರಿಯಲು ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಮನೆಯವರಾದ ಮುನಿಯಪ್ಪ, ಹೆಂಡತಿ ಲಕ್ಷ್ಮಮ್ಮ ಹಾಗೂ ಮಗ ಅಶ್ವಥ್ ಆ ಕೆಲಸವನ್ನ ತಡೆದಿದ್ದಾರೆ ಎನ್ನಲಾಗಿದೆ.

ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪ ಕುರಿತು ಮುನಿಯಪ್ಪರನ್ನ ಕೇಳಿದ್ದಾಗ, ಕೃಷ್ಣಮೂರ್ತಿಯವರ ಆರೋಪವನ್ನ ಅಲ್ಲಗೆಳೆಯುತ್ತಾರೆ, ಆದರೆ ಮೊಬೈಲ್ ವಿಡಿಯೋದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರೋದು ಮತ್ತು ಜೀವ ಬೆದರಿಕೆಯ ದೃಶ್ಯ ದಾಖಲಾಗಿದೆ.

ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

3 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

11 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago