ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.
ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…