ತಡೆಗೋಡೆ ಕಟ್ಟಲು ಪಕ್ಕದ ಮನೆಯವನಿಂದ ಅಡ್ಡಗಾಲು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ

ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.

ಕೃಷ್ಣಮೂರ್ತಿಯವರು ತಮ್ಮ 10 ಗುಂಟೆ ಜಾಗಕ್ಕೆ ಕೌಂಪೌಂಡ್ ನಿರ್ಮಿಸಲು ತಿರ್ಮಾನ ಮಾಡಿದ್ದರು. ಕೌಂಪೌಂಡ್ ನಿರ್ಮಾಣಕ್ಕೆ ಬೇಕಾದ ಹಾಲೋ ಬ್ರಿಕ್ಸ್ ಮತ್ತು ಎಂ.ಸಾಂಡ್ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಬೇಕಾದ ವಸ್ತುಗಳ ಸರಬರಾಜು ಮಾಡಲು ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ ಗುತ್ತಿಗೆ ನೀಡಿದ್ದರು. ಒಪ್ಪಂದದ ಮೇರೆಗೆ  ಕೃಷ್ಣಮೂರ್ತಿ ಮತ್ತು ಆನಂದ್ ಅವರು ನವೆಂಬರ್ 1 ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಟ್ರ್ಯಾಕ್ಟರ್ ನಲ್ಲಿ ಎಂ ಸಾಂಡ್ ಸುರಿಯಲು ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಮನೆಯವರಾದ ಮುನಿಯಪ್ಪ, ಹೆಂಡತಿ ಲಕ್ಷ್ಮಮ್ಮ ಹಾಗೂ ಮಗ ಅಶ್ವಥ್ ಆ ಕೆಲಸವನ್ನ ತಡೆದಿದ್ದಾರೆ ಎನ್ನಲಾಗಿದೆ.

ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪ ಕುರಿತು ಮುನಿಯಪ್ಪರನ್ನ ಕೇಳಿದ್ದಾಗ, ಕೃಷ್ಣಮೂರ್ತಿಯವರ ಆರೋಪವನ್ನ ಅಲ್ಲಗೆಳೆಯುತ್ತಾರೆ, ಆದರೆ ಮೊಬೈಲ್ ವಿಡಿಯೋದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರೋದು ಮತ್ತು ಜೀವ ಬೆದರಿಕೆಯ ದೃಶ್ಯ ದಾಖಲಾಗಿದೆ.

ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

4 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

19 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago