ಯಲಹಂಕ : ತಡೆಗೋಡೆ ನಿರ್ಮಾಣಕ್ಕೆಂದು ಹೋದವರ ಮೇಲೆ ಪಕ್ಕದ ಮನೆಯವರು ಸುಖಾಸುಮ್ಮನೆ ದೌರ್ಜನ್ಯ ಎಸೆಗಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ, ಅಷ್ಟಕ್ಕೆ ಸುಮ್ಮನಾದ ಆತ ಮಚ್ಚನ್ನ ತನ್ನಿ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಆರೋಪಿಸಿ, ತಮಗೆ ರಕ್ಷಣೆ ನೀಡುವಂತೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಯಲಹಂಕದ ಅಟ್ಟೂರು ಲೇಔಟ್ ನ ವೀರಸಾಗರ ಮುಖ್ಯರಸ್ತೆಯ ಕೃಷ್ಣಮೂರ್ತಿಯವರಿಗೆ ಸೇರಿದ ಸರ್ವೇ ನಂಬರ್ 36/1 ರಲ್ಲಿ ಘಟನೆ ನಡೆದಿದೆ.
ಸರ್ವೇ ನಂಬರ್ 36/1 ರಲ್ಲಿ ಒಂದು ಎಕರೆ 21 ಗುಂಟೆ ಜಾಗವಿದ್ದು, ಮುನಿಯಪ್ಪರವರಿಗೆ ಸೇರಿದ್ದು ಒಂದು ಎಕರೆ 11 ಗುಂಟೆ, ಇನ್ನುಳಿದ 10 ಗುಂಟೆ ಜಾಗ ಕೃಷ್ಣಮೂರ್ತಿಯವರಿಗೆ ಸೇರಿದ್ದು, ಆದರೆ ಮುನಿಯಪ್ಪ ಭೂದಾಖಲೆಗಳನ್ನ ತಿದ್ದಿ ಒಂದು ಎಕರೆ 21 ಗುಂಟೆ ಎಂದು ಪೋಡಿ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನ ಸೃಷ್ಠಿ ಮಾಡಿರುವು ಮುನಿಯಪ್ಪ ಮೇಲೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ಅವಾಚ್ಯ ಶಬ್ದಗಳ ನಿಂದನೆ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಮುನಿಯಪ್ಪ ಮತ್ತು ಆತನ ಮಗನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ, ಆದರೆ ಪೊಲೀಸರು ಇಲ್ಲಿಯವರೆಗೂ ಪ್ರಕರಣ ದಾಖಲು ಮಾಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…