ತನಗಾದ ಅನ್ಯಾಯ ಖಂಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಡಿಸಿ ಕಚೇರಿ ಎದುರು ಮಾಜಿ ಯೋಧ ಏಕಾಂಗಿ ಹೋರಾಟ

ರಾಜಕೀಯ ದ್ವೇಷದಿಂದ ಜಮೀನಿನಲ್ಲಿ ಬೆಳೆದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆಯನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಮಾಜಿ ಯೋಧರೊಬ್ಬರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ದೇವನಹಳ್ಳಿ ತಾಲೂಕಿನ ಹಾರೋಹಳ್ಳಿಯ ಹೆಚ್.ಎಂ ರಾಜಗೋಪಾಲ್ ಮಾಜಿಯೋಧ, ಬಿಎಸ್​ಎಫ್​ನಲ್ಲಿ 35 ವರ್ಷ ದೇಶ ಸೇವೆ ಸಲ್ಲಿಸಿರುವ ಅವರು ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿದ್ದರು. ಜೈ ಜವಾನ್, ಜೈ ಕಿಸಾನ್ ವಾಕ್ಯದಂತೆ ಕೃಷಿಕನಾಗುವ ಕನಸ್ಸು ಕಂಡಿದ್ದರು. ಆದರೇ ತಂದೆಯಿಂದ ಬಂದ 20 ಗುಂಟೆ ಜಮೀನಿನಲ್ಲಿ ಕೃಷಿ ಮಾಡೋದು ಅಸಾಧ್ಯವಾಗಿತ್ತು. ಆದ ಕಾರಣ ಗ್ರಾಮದ ಸರ್ವೆ ನಂಬರ್ 73ರ ಸರ್ಕಾರಿ ಗೋಮಾಳದ ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು.

ಎರಡು ಎಕರೆ ಜಮೀನು ಮಂಜೂರು ಮಾಡುವಂತೆ ಫಾರಂ 57 ಅರ್ಜಿಯನ್ನೂ ಹಾಕಿದ್ದರು. ಆದರೆ, ರಾಜಕೀಯ ದ್ವೇಷದಿಂದ ಬೆಳೆದಿದ್ದ ಬೆಳೆಗಳನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ನಿವೇಶನ ಮಾಡಿಸಲು ಮಾಜಿ ಯೋಧನ ಜಮೀನಿನ ಮೇಲೆ ಕಣ್ಣು:

ಹಾರೋಹಳ್ಳಿ ಗ್ರಾಮದ ಸರ್ವೇ ನಂಬರ್ 73ರ ಸರ್ಕಾರಿ ಗೋಮಾಳದಲ್ಲಿ ಗ್ರಾಮದ ಬಹುತೇಕ ಜನರು ಸಾಗುವಳಿ ಮಾಡುತ್ತಿದ್ದಾರೆ. ಜಮೀನು ಮಂಜೂರಿಗಾಗಿ ಫಾರಂ 57 ಅರ್ಜಿ ಹಾಕಿದ್ದಾರೆ. ಆದರೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ರಾಜಗೋಪಾಲ್ ಜಮೀನಿನಲ್ಲೇ ನಿವೇಶನ ಮಾಡಿಸಲು ನಿರ್ಣಯ ಕೈಗೊಂಡಿದ್ದಾರೆ. ಇದೇ ನೆಪ ಮಾಡಿಕೊಂಡ ರಾಜಕೀಯ ಮುಖಂಡರು ಏಕಾಏಕಿ ಬಂದು ಜಮೀನು ತೆರವು ಮಾಡಿದ್ದಲ್ಲದೆ, ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆ ನಾಶ ಮಾಡಿದ್ದಾರೆಂದು ರಾಜಗೋಪಾಲ್ ಧರಣಿ ನಡೆಸಿದ್ದಾರೆ.

ಮಾಜಿ ಯೋಧನ ಪತ್ನಿ ಪಕ್ಷ ಬಿಟ್ಟಿದ್ದಕ್ಕೆ ಕಿರುಕುಳ :

ರಾಜಗೋಪಾಲ್ ಪತ್ನಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಸೇನೆಯಿಂದ ನಿವೃತ್ತಿಯಾದ ನಂತರ ರಾಜಕೀಯದಿಂದ ಅವರು ದೂರ ಉಳಿದಿದ್ದರು. ಇದು ರಾಜಕೀಯ ದ್ವೇಷ ಸಾಧನೆಗೆ ಕಾರಣವಾಗಿದೆ. ಗ್ರಾಮದ ರಾಘವೇಂದ್ರ, ಸೊಣ್ಣೇಗೌಡ, ಹೆಚ್.ಜಿ ಶ್ರೀನಿವಾಸ್, ಚಂದ್ರಪ್ಪ ಮುನಿಯಪ್ಪ ಎಂಬುವರು ಸರ್ಕಾರದಿಂದ ನಿವೇಶನಕ್ಕಾಗಿ ಜಮೀನು ಮಂಜೂರಾಗದೆ ಇದ್ದರೂ ದ್ವೇಷ ಸಾಧನೆಗಾಗಿ ನಮ್ಮ ಸಾಗುವಳಿ ಜಮೀನನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ರಾಜಗೋಪಾಲ್ ಹೇಳಿದ್ದಾರೆ. ಅಲ್ಲದೇ ಗ್ರಾಮದ ರಾಜಕೀಯ ಮುಖಂಡರ ಪಿತೂರಿಗೆ ಬೇಸತ್ತ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆಗೆ ಕುಳಿತಿದ್ದಾರೆ. ದೇಶ ಸೇವೆ ಮಾಡಿದ ನನಗೆ ಕೃಷಿ ಮಾಡಲು ಎರಡು ಎಕರೆ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

37 minutes ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago