ತನಗಾದ ಅನ್ಯಾಯ ಖಂಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಡಿಸಿ ಕಚೇರಿ ಎದುರು ಮಾಜಿ ಯೋಧ ಏಕಾಂಗಿ ಹೋರಾಟ

ರಾಜಕೀಯ ದ್ವೇಷದಿಂದ ಜಮೀನಿನಲ್ಲಿ ಬೆಳೆದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆಯನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಮಾಜಿ ಯೋಧರೊಬ್ಬರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ದೇವನಹಳ್ಳಿ ತಾಲೂಕಿನ ಹಾರೋಹಳ್ಳಿಯ ಹೆಚ್.ಎಂ ರಾಜಗೋಪಾಲ್ ಮಾಜಿಯೋಧ, ಬಿಎಸ್​ಎಫ್​ನಲ್ಲಿ 35 ವರ್ಷ ದೇಶ ಸೇವೆ ಸಲ್ಲಿಸಿರುವ ಅವರು ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿದ್ದರು. ಜೈ ಜವಾನ್, ಜೈ ಕಿಸಾನ್ ವಾಕ್ಯದಂತೆ ಕೃಷಿಕನಾಗುವ ಕನಸ್ಸು ಕಂಡಿದ್ದರು. ಆದರೇ ತಂದೆಯಿಂದ ಬಂದ 20 ಗುಂಟೆ ಜಮೀನಿನಲ್ಲಿ ಕೃಷಿ ಮಾಡೋದು ಅಸಾಧ್ಯವಾಗಿತ್ತು. ಆದ ಕಾರಣ ಗ್ರಾಮದ ಸರ್ವೆ ನಂಬರ್ 73ರ ಸರ್ಕಾರಿ ಗೋಮಾಳದ ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು.

ಎರಡು ಎಕರೆ ಜಮೀನು ಮಂಜೂರು ಮಾಡುವಂತೆ ಫಾರಂ 57 ಅರ್ಜಿಯನ್ನೂ ಹಾಕಿದ್ದರು. ಆದರೆ, ರಾಜಕೀಯ ದ್ವೇಷದಿಂದ ಬೆಳೆದಿದ್ದ ಬೆಳೆಗಳನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ನಿವೇಶನ ಮಾಡಿಸಲು ಮಾಜಿ ಯೋಧನ ಜಮೀನಿನ ಮೇಲೆ ಕಣ್ಣು:

ಹಾರೋಹಳ್ಳಿ ಗ್ರಾಮದ ಸರ್ವೇ ನಂಬರ್ 73ರ ಸರ್ಕಾರಿ ಗೋಮಾಳದಲ್ಲಿ ಗ್ರಾಮದ ಬಹುತೇಕ ಜನರು ಸಾಗುವಳಿ ಮಾಡುತ್ತಿದ್ದಾರೆ. ಜಮೀನು ಮಂಜೂರಿಗಾಗಿ ಫಾರಂ 57 ಅರ್ಜಿ ಹಾಕಿದ್ದಾರೆ. ಆದರೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ರಾಜಗೋಪಾಲ್ ಜಮೀನಿನಲ್ಲೇ ನಿವೇಶನ ಮಾಡಿಸಲು ನಿರ್ಣಯ ಕೈಗೊಂಡಿದ್ದಾರೆ. ಇದೇ ನೆಪ ಮಾಡಿಕೊಂಡ ರಾಜಕೀಯ ಮುಖಂಡರು ಏಕಾಏಕಿ ಬಂದು ಜಮೀನು ತೆರವು ಮಾಡಿದ್ದಲ್ಲದೆ, ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆ ನಾಶ ಮಾಡಿದ್ದಾರೆಂದು ರಾಜಗೋಪಾಲ್ ಧರಣಿ ನಡೆಸಿದ್ದಾರೆ.

ಮಾಜಿ ಯೋಧನ ಪತ್ನಿ ಪಕ್ಷ ಬಿಟ್ಟಿದ್ದಕ್ಕೆ ಕಿರುಕುಳ :

ರಾಜಗೋಪಾಲ್ ಪತ್ನಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಸೇನೆಯಿಂದ ನಿವೃತ್ತಿಯಾದ ನಂತರ ರಾಜಕೀಯದಿಂದ ಅವರು ದೂರ ಉಳಿದಿದ್ದರು. ಇದು ರಾಜಕೀಯ ದ್ವೇಷ ಸಾಧನೆಗೆ ಕಾರಣವಾಗಿದೆ. ಗ್ರಾಮದ ರಾಘವೇಂದ್ರ, ಸೊಣ್ಣೇಗೌಡ, ಹೆಚ್.ಜಿ ಶ್ರೀನಿವಾಸ್, ಚಂದ್ರಪ್ಪ ಮುನಿಯಪ್ಪ ಎಂಬುವರು ಸರ್ಕಾರದಿಂದ ನಿವೇಶನಕ್ಕಾಗಿ ಜಮೀನು ಮಂಜೂರಾಗದೆ ಇದ್ದರೂ ದ್ವೇಷ ಸಾಧನೆಗಾಗಿ ನಮ್ಮ ಸಾಗುವಳಿ ಜಮೀನನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ರಾಜಗೋಪಾಲ್ ಹೇಳಿದ್ದಾರೆ. ಅಲ್ಲದೇ ಗ್ರಾಮದ ರಾಜಕೀಯ ಮುಖಂಡರ ಪಿತೂರಿಗೆ ಬೇಸತ್ತ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆಗೆ ಕುಳಿತಿದ್ದಾರೆ. ದೇಶ ಸೇವೆ ಮಾಡಿದ ನನಗೆ ಕೃಷಿ ಮಾಡಲು ಎರಡು ಎಕರೆ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago