ತನಗಾದ ಅನ್ಯಾಯ ಖಂಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಡಿಸಿ ಕಚೇರಿ ಎದುರು ಮಾಜಿ ಯೋಧ ಏಕಾಂಗಿ ಹೋರಾಟ

ರಾಜಕೀಯ ದ್ವೇಷದಿಂದ ಜಮೀನಿನಲ್ಲಿ ಬೆಳೆದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆಯನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಮಾಜಿ ಯೋಧರೊಬ್ಬರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ದೇವನಹಳ್ಳಿ ತಾಲೂಕಿನ ಹಾರೋಹಳ್ಳಿಯ ಹೆಚ್.ಎಂ ರಾಜಗೋಪಾಲ್ ಮಾಜಿಯೋಧ, ಬಿಎಸ್​ಎಫ್​ನಲ್ಲಿ 35 ವರ್ಷ ದೇಶ ಸೇವೆ ಸಲ್ಲಿಸಿರುವ ಅವರು ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿದ್ದರು. ಜೈ ಜವಾನ್, ಜೈ ಕಿಸಾನ್ ವಾಕ್ಯದಂತೆ ಕೃಷಿಕನಾಗುವ ಕನಸ್ಸು ಕಂಡಿದ್ದರು. ಆದರೇ ತಂದೆಯಿಂದ ಬಂದ 20 ಗುಂಟೆ ಜಮೀನಿನಲ್ಲಿ ಕೃಷಿ ಮಾಡೋದು ಅಸಾಧ್ಯವಾಗಿತ್ತು. ಆದ ಕಾರಣ ಗ್ರಾಮದ ಸರ್ವೆ ನಂಬರ್ 73ರ ಸರ್ಕಾರಿ ಗೋಮಾಳದ ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು.

ಎರಡು ಎಕರೆ ಜಮೀನು ಮಂಜೂರು ಮಾಡುವಂತೆ ಫಾರಂ 57 ಅರ್ಜಿಯನ್ನೂ ಹಾಕಿದ್ದರು. ಆದರೆ, ರಾಜಕೀಯ ದ್ವೇಷದಿಂದ ಬೆಳೆದಿದ್ದ ಬೆಳೆಗಳನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ನಿವೇಶನ ಮಾಡಿಸಲು ಮಾಜಿ ಯೋಧನ ಜಮೀನಿನ ಮೇಲೆ ಕಣ್ಣು:

ಹಾರೋಹಳ್ಳಿ ಗ್ರಾಮದ ಸರ್ವೇ ನಂಬರ್ 73ರ ಸರ್ಕಾರಿ ಗೋಮಾಳದಲ್ಲಿ ಗ್ರಾಮದ ಬಹುತೇಕ ಜನರು ಸಾಗುವಳಿ ಮಾಡುತ್ತಿದ್ದಾರೆ. ಜಮೀನು ಮಂಜೂರಿಗಾಗಿ ಫಾರಂ 57 ಅರ್ಜಿ ಹಾಕಿದ್ದಾರೆ. ಆದರೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ರಾಜಗೋಪಾಲ್ ಜಮೀನಿನಲ್ಲೇ ನಿವೇಶನ ಮಾಡಿಸಲು ನಿರ್ಣಯ ಕೈಗೊಂಡಿದ್ದಾರೆ. ಇದೇ ನೆಪ ಮಾಡಿಕೊಂಡ ರಾಜಕೀಯ ಮುಖಂಡರು ಏಕಾಏಕಿ ಬಂದು ಜಮೀನು ತೆರವು ಮಾಡಿದ್ದಲ್ಲದೆ, ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆ ನಾಶ ಮಾಡಿದ್ದಾರೆಂದು ರಾಜಗೋಪಾಲ್ ಧರಣಿ ನಡೆಸಿದ್ದಾರೆ.

ಮಾಜಿ ಯೋಧನ ಪತ್ನಿ ಪಕ್ಷ ಬಿಟ್ಟಿದ್ದಕ್ಕೆ ಕಿರುಕುಳ :

ರಾಜಗೋಪಾಲ್ ಪತ್ನಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಸೇನೆಯಿಂದ ನಿವೃತ್ತಿಯಾದ ನಂತರ ರಾಜಕೀಯದಿಂದ ಅವರು ದೂರ ಉಳಿದಿದ್ದರು. ಇದು ರಾಜಕೀಯ ದ್ವೇಷ ಸಾಧನೆಗೆ ಕಾರಣವಾಗಿದೆ. ಗ್ರಾಮದ ರಾಘವೇಂದ್ರ, ಸೊಣ್ಣೇಗೌಡ, ಹೆಚ್.ಜಿ ಶ್ರೀನಿವಾಸ್, ಚಂದ್ರಪ್ಪ ಮುನಿಯಪ್ಪ ಎಂಬುವರು ಸರ್ಕಾರದಿಂದ ನಿವೇಶನಕ್ಕಾಗಿ ಜಮೀನು ಮಂಜೂರಾಗದೆ ಇದ್ದರೂ ದ್ವೇಷ ಸಾಧನೆಗಾಗಿ ನಮ್ಮ ಸಾಗುವಳಿ ಜಮೀನನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ರಾಜಗೋಪಾಲ್ ಹೇಳಿದ್ದಾರೆ. ಅಲ್ಲದೇ ಗ್ರಾಮದ ರಾಜಕೀಯ ಮುಖಂಡರ ಪಿತೂರಿಗೆ ಬೇಸತ್ತ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆಗೆ ಕುಳಿತಿದ್ದಾರೆ. ದೇಶ ಸೇವೆ ಮಾಡಿದ ನನಗೆ ಕೃಷಿ ಮಾಡಲು ಎರಡು ಎಕರೆ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago