ತನಗಿಂತ ಎರಡು ವರ್ಷದ ದೊಡ್ಡವಳಾದ ಡಾಕ್ಟರಮ್ಮನ ಮೇಲೆ ಯುವನಿಗೆ ಪ್ರೀತಿ: ಪ್ರೀತ್ಸಿದ್ ತಪ್ಪಿಗೆ ಬೀದಿ ಹೆಣವಾದ ಪ್ರೀತಂ

ಆ ಹುಡುಗ ಶಾಲಾ ರಜಾ ದಿನಗಳಲ್ಲಿ ತನ್ನ ಸೋದರ ಮಾವನ‌ ಮನೆಗೆ ಹೋಗುತ್ತಿದ್ದ. ಈ ವೇಳೆ ಎದುರು ಮನೆಯಲ್ಲಿದ್ದ ತನಗಿಂತ ವಯಸ್ಸಿನಲ್ಲಿ ದೊಡ್ಡವಳಾಗಿದ್ದ ಯುವತಿ ಮೇಲೆ‌ ಪ್ರೀತಿಯಾಗಿದೆ‌. ಶಾಲೆ ಬಿಟ್ಟು ಚಿಕ್ಕವಯಸ್ಸಿನಲ್ಲೇ ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು,  ಕುಟುಂಬ ನಿರ್ವಹಣೆಗೆ ಕೆಲಸಕ್ಕೆ ಹೋಗುತ್ತಿದ್ದ. ತನಗಿಂತ ಎರಡು ವರ್ಷ ದೊಡ್ಡವಳಾದ ಡಾಕ್ಟರಮ್ಮನ ಪ್ರೀತಿ ಮಾಡಿದ ತಪ್ಪಿಗೆ ಬೀದಿ ಹೆಣವಾಗಿದ್ದಾನೆ. ಇನ್ನು ಎಲ್ಲಿ ಏನು ಅಂತೀರಾ ಈ ಸ್ಟೋರಿ ನೋಡಿ………..

ಮಗನನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ…

ಪ್ರೀತಿ ಮಾಡಿದ ತಪ್ಪಿಗೆ ಬೀದಿ ಹೆಣವಾಗಿ ಬಿದ್ದಿರುವ ಯುವಕ…. ಹೌದು ಇನ್ನು ಈ ಫೋಟೋದಲ್ಲಿ ಕಾಣುತ್ತಿರುವ ಯುವಕನ ಹೆಸರು ಪ್ರೀತಮ್(19). ಪ್ರೀತಿಸಿದ ತಪ್ಪಿಗೆ ಹೆಣವಾಗಿಬಿದ್ದಿದ್ದಾನೆ. ಈ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಬಳಿಯ ನೀರುಗುಂಟೆಪಾಳ್ಯದಲ್ಲಿ ನಡೆದಿದೆ.

ಇನ್ನು ಯುವಕ ತನ್ನ ಚಿಕ್ಕವಯಸ್ಸಿನಲ್ಲೇ ತನ್ನ ತಂದೆಗೆ ಅಪಘಾತವಾಗಿ ಕಾಲು ಮುರಿದಿದ್ದರಿಂದ ಕುಟುಂಬದ ಜವಾಬ್ದಾರಿಯನ್ನು ಹೊತ್ತಿದ್ದ. ಹೀಗೆ ಸುಖವಾಗಿ ಜೀವನ ನಡೆಸುತ್ತಿದ್ದ ಯುವಕನ ಬಾಳಲ್ಲಿ ಬರ ಸಿಡಿಲಿನಂತೆ ಬಂದ ತನಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವಳಾದ ಯುವತಿಯ ಮೇಲೆ ಸ್ನೇಹ ಮಾಡಿ ಕೊನೆಗೆ ಪ್ರೀತಿಗೆ ತಿರುಗಿತ್ತು..

ಯುವಕ ಮಾಡಿದ್ದು ಇದೇ ತಪ್ಪು ನೋಡಿ, ಪ್ರೀತಿ ಮಾಡಿದ ತಪ್ಪಿಗೆ ಹುಡುಗಿಯ ಸಂಬಧಿಕರಾದ ಶ್ರೀಕಾಂತ್, ಹಾಗೂ ಸಂಜು ಅನ್ನೋ ವ್ಯಕ್ತಿಗಳು ಮೊದಲೇ ಪ್ಲಾನ್ ಮಾಡಿ ಮದುವೆಗೆ ಸಿಂಗಾರ ಮಾಡಿದ್ದ ಬ್ರೇಜ್ಜಾ ಕಾರ್ ನಲ್ಲಿ ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಮೃತಪಟ್ಟ ಯುವಕನ ಮೃತ ದೇಹವನ್ನು ಯುವಕನ ಅಜ್ಜಿಯ ಮನೆಯಾದ ತಾಲೂಕಿನ ನಿರುಗುಂಟೆಪಾಳ್ಯ ಬಳಿ ರಾತ್ರಿ ವೇಳೆ ದುರುಳರು ಎಸೆದು ಹೋಗಿದ್ದಾರೆ.

ಇನ್ನು ತಮ್ಮ ಮಗನನ್ನು ಕಳೆದುಕೊಂಡ ತಾಯಿ ಹಾಗೂ ಸಂಬಂಧಿಕರು ನನ್ನ ಮಗನನ್ನ ಚಿಕ್ಕ ವಯಸ್ಸಿನಿಂದ ಏನು ತಪ್ಪು ಮಾಡದ ಹಾಗೆ ಬೆಳೆಸಿದ್ದೇವೆ. ಇಂತಹ ಅಮಾಯಕನನ್ನು ಹಿನಾಯವಾಗಿ ಕೊಂದು ನಮ್ಮ ಕುಟುಂಬಕ್ಕೆ ಆಸರೆ ಇಲ್ಲದೇ ಹಾಗೆ ಮಾಡಿದ್ದಾರೆ ಅಂತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅಂದಹಾಗೆ ಯುವಕನ ಕುಟುಂಬ ದೇವನಹಳ್ಳಿ ಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತಪಟ್ಟ ಯುವಕ ಪಟ್ಟಣದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇನ್ನೂ ಎಂಬಿಬಿಎಸ್ ವ್ಯಾಸಾಂಗ ಮಾಡ್ತಿದ್ದ ಯುವತಿ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಯುವತಿಯ ಸಂಬಂಧಿಕರು ಯುವಕನಿಗೆ ಮೂರ್ನಾಲ್ಕು ಬಾರಿ ವಾರ್ನಿಂಗ್ ಸಹ ನೀಡಿದ್ದರು.

ವಾರ್ನಿಂಗ್ ಮಾಡಿದ್ರು ಪ್ರೀತಿ ಮುಂದುವರೆಸಿದ್ದ ಹಿನ್ನೆಲೆ, ಕಂಠಪೂರ್ತಿ ಕುಡಿದು ನಾಲ್ಕೈದು ಜನರಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ವೇಳೆ‌ ಯುವಕ‌ ಸಾವನಪ್ಪಿದ್ದು ಮೃತದೇಹವನ್ನು ಆರೋಪಿಗಳು ಬಿಸಾಕಿ ಎಸ್ಕೇಪ್ ಆಗಿದ್ದರು.

ಇನ್ನು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುವಕನ ಸಂಬಂಧಿಕರು ಆರೋಪಿಗಳ ಮೇಲೆ ದೂರು ನೀಡಿದ್ದಾರೆ. ಆದರೆ ಪೊಲೀಸ್ ಠಾಣೆಗೆ ಬಂದ ಯುವತಿಯ ತಂದೆ ಹೇಳಿದ್ದೆ ಬೇರೆ ಮೃತಪಟ್ಟ ಯುವಕ ನನ್ನ ಮಗಳೊಂದಿಗೆ ಪ್ರತಿ ದಿನ ಮಾತನಾಡುತ್ತಿದ್ದು, ನನ್ಮ ಮಗಳ ಫೋಟೋಗಳನ್ನು ಇಟ್ಟಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ.. ಆದರೂ ಈ ಕೊಲೆಗೆ ನಮಗೆ ಸಂಬಂಧ ಇಲ್ಲ ಅಂತ ತಿಳಿಸಿದ್ದಾರೆ.

ದೇವನಹಳ್ಳಿ ಪೋಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಒಟ್ಟಾರೆ ಯುವಕನ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕಿಡ್ನಾಪ್ ಮಾಡಿದ್ದ ಕಾರು ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಇನ್ನು ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದರು ಅಂತ ತನಿಖೆಯಲ್ಲಿ ಮತ್ತಷ್ಟು ಸ್ಟೋಟಕ ಮಾಹಿತಿಗಳು ಹೊರಬೀಳೋದು ಬಾಕಿ ಇದೆ.‌

ಆದರೆ ಡಾಕ್ಟರಮ್ಮನ ಪ್ರೀತಿಗೆ ಬಿದ್ದಿದ್ದ ಯುವಕ ಬೀದಿ ಹೆಣವಾಗಿದ್ದು ಮಾತ್ರ ದುರ್ದೈವ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

47 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

6 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago