ತನಗಿಂತ ಎರಡು ವರ್ಷದ ದೊಡ್ಡವಳಾದ ಡಾಕ್ಟರಮ್ಮನ ಮೇಲೆ ಯುವನಿಗೆ ಪ್ರೀತಿ: ಪ್ರೀತ್ಸಿದ್ ತಪ್ಪಿಗೆ ಬೀದಿ ಹೆಣವಾದ ಪ್ರೀತಂ

ಆ ಹುಡುಗ ಶಾಲಾ ರಜಾ ದಿನಗಳಲ್ಲಿ ತನ್ನ ಸೋದರ ಮಾವನ‌ ಮನೆಗೆ ಹೋಗುತ್ತಿದ್ದ. ಈ ವೇಳೆ ಎದುರು ಮನೆಯಲ್ಲಿದ್ದ ತನಗಿಂತ ವಯಸ್ಸಿನಲ್ಲಿ ದೊಡ್ಡವಳಾಗಿದ್ದ ಯುವತಿ ಮೇಲೆ‌ ಪ್ರೀತಿಯಾಗಿದೆ‌. ಶಾಲೆ ಬಿಟ್ಟು ಚಿಕ್ಕವಯಸ್ಸಿನಲ್ಲೇ ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು,  ಕುಟುಂಬ ನಿರ್ವಹಣೆಗೆ ಕೆಲಸಕ್ಕೆ ಹೋಗುತ್ತಿದ್ದ. ತನಗಿಂತ ಎರಡು ವರ್ಷ ದೊಡ್ಡವಳಾದ ಡಾಕ್ಟರಮ್ಮನ ಪ್ರೀತಿ ಮಾಡಿದ ತಪ್ಪಿಗೆ ಬೀದಿ ಹೆಣವಾಗಿದ್ದಾನೆ. ಇನ್ನು ಎಲ್ಲಿ ಏನು ಅಂತೀರಾ ಈ ಸ್ಟೋರಿ ನೋಡಿ………..

ಮಗನನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ…

ಪ್ರೀತಿ ಮಾಡಿದ ತಪ್ಪಿಗೆ ಬೀದಿ ಹೆಣವಾಗಿ ಬಿದ್ದಿರುವ ಯುವಕ…. ಹೌದು ಇನ್ನು ಈ ಫೋಟೋದಲ್ಲಿ ಕಾಣುತ್ತಿರುವ ಯುವಕನ ಹೆಸರು ಪ್ರೀತಮ್(19). ಪ್ರೀತಿಸಿದ ತಪ್ಪಿಗೆ ಹೆಣವಾಗಿಬಿದ್ದಿದ್ದಾನೆ. ಈ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಬಳಿಯ ನೀರುಗುಂಟೆಪಾಳ್ಯದಲ್ಲಿ ನಡೆದಿದೆ.

ಇನ್ನು ಯುವಕ ತನ್ನ ಚಿಕ್ಕವಯಸ್ಸಿನಲ್ಲೇ ತನ್ನ ತಂದೆಗೆ ಅಪಘಾತವಾಗಿ ಕಾಲು ಮುರಿದಿದ್ದರಿಂದ ಕುಟುಂಬದ ಜವಾಬ್ದಾರಿಯನ್ನು ಹೊತ್ತಿದ್ದ. ಹೀಗೆ ಸುಖವಾಗಿ ಜೀವನ ನಡೆಸುತ್ತಿದ್ದ ಯುವಕನ ಬಾಳಲ್ಲಿ ಬರ ಸಿಡಿಲಿನಂತೆ ಬಂದ ತನಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವಳಾದ ಯುವತಿಯ ಮೇಲೆ ಸ್ನೇಹ ಮಾಡಿ ಕೊನೆಗೆ ಪ್ರೀತಿಗೆ ತಿರುಗಿತ್ತು..

ಯುವಕ ಮಾಡಿದ್ದು ಇದೇ ತಪ್ಪು ನೋಡಿ, ಪ್ರೀತಿ ಮಾಡಿದ ತಪ್ಪಿಗೆ ಹುಡುಗಿಯ ಸಂಬಧಿಕರಾದ ಶ್ರೀಕಾಂತ್, ಹಾಗೂ ಸಂಜು ಅನ್ನೋ ವ್ಯಕ್ತಿಗಳು ಮೊದಲೇ ಪ್ಲಾನ್ ಮಾಡಿ ಮದುವೆಗೆ ಸಿಂಗಾರ ಮಾಡಿದ್ದ ಬ್ರೇಜ್ಜಾ ಕಾರ್ ನಲ್ಲಿ ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಮೃತಪಟ್ಟ ಯುವಕನ ಮೃತ ದೇಹವನ್ನು ಯುವಕನ ಅಜ್ಜಿಯ ಮನೆಯಾದ ತಾಲೂಕಿನ ನಿರುಗುಂಟೆಪಾಳ್ಯ ಬಳಿ ರಾತ್ರಿ ವೇಳೆ ದುರುಳರು ಎಸೆದು ಹೋಗಿದ್ದಾರೆ.

ಇನ್ನು ತಮ್ಮ ಮಗನನ್ನು ಕಳೆದುಕೊಂಡ ತಾಯಿ ಹಾಗೂ ಸಂಬಂಧಿಕರು ನನ್ನ ಮಗನನ್ನ ಚಿಕ್ಕ ವಯಸ್ಸಿನಿಂದ ಏನು ತಪ್ಪು ಮಾಡದ ಹಾಗೆ ಬೆಳೆಸಿದ್ದೇವೆ. ಇಂತಹ ಅಮಾಯಕನನ್ನು ಹಿನಾಯವಾಗಿ ಕೊಂದು ನಮ್ಮ ಕುಟುಂಬಕ್ಕೆ ಆಸರೆ ಇಲ್ಲದೇ ಹಾಗೆ ಮಾಡಿದ್ದಾರೆ ಅಂತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅಂದಹಾಗೆ ಯುವಕನ ಕುಟುಂಬ ದೇವನಹಳ್ಳಿ ಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತಪಟ್ಟ ಯುವಕ ಪಟ್ಟಣದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇನ್ನೂ ಎಂಬಿಬಿಎಸ್ ವ್ಯಾಸಾಂಗ ಮಾಡ್ತಿದ್ದ ಯುವತಿ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಯುವತಿಯ ಸಂಬಂಧಿಕರು ಯುವಕನಿಗೆ ಮೂರ್ನಾಲ್ಕು ಬಾರಿ ವಾರ್ನಿಂಗ್ ಸಹ ನೀಡಿದ್ದರು.

ವಾರ್ನಿಂಗ್ ಮಾಡಿದ್ರು ಪ್ರೀತಿ ಮುಂದುವರೆಸಿದ್ದ ಹಿನ್ನೆಲೆ, ಕಂಠಪೂರ್ತಿ ಕುಡಿದು ನಾಲ್ಕೈದು ಜನರಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ವೇಳೆ‌ ಯುವಕ‌ ಸಾವನಪ್ಪಿದ್ದು ಮೃತದೇಹವನ್ನು ಆರೋಪಿಗಳು ಬಿಸಾಕಿ ಎಸ್ಕೇಪ್ ಆಗಿದ್ದರು.

ಇನ್ನು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುವಕನ ಸಂಬಂಧಿಕರು ಆರೋಪಿಗಳ ಮೇಲೆ ದೂರು ನೀಡಿದ್ದಾರೆ. ಆದರೆ ಪೊಲೀಸ್ ಠಾಣೆಗೆ ಬಂದ ಯುವತಿಯ ತಂದೆ ಹೇಳಿದ್ದೆ ಬೇರೆ ಮೃತಪಟ್ಟ ಯುವಕ ನನ್ನ ಮಗಳೊಂದಿಗೆ ಪ್ರತಿ ದಿನ ಮಾತನಾಡುತ್ತಿದ್ದು, ನನ್ಮ ಮಗಳ ಫೋಟೋಗಳನ್ನು ಇಟ್ಟಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ.. ಆದರೂ ಈ ಕೊಲೆಗೆ ನಮಗೆ ಸಂಬಂಧ ಇಲ್ಲ ಅಂತ ತಿಳಿಸಿದ್ದಾರೆ.

ದೇವನಹಳ್ಳಿ ಪೋಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಒಟ್ಟಾರೆ ಯುವಕನ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕಿಡ್ನಾಪ್ ಮಾಡಿದ್ದ ಕಾರು ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಇನ್ನು ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದರು ಅಂತ ತನಿಖೆಯಲ್ಲಿ ಮತ್ತಷ್ಟು ಸ್ಟೋಟಕ ಮಾಹಿತಿಗಳು ಹೊರಬೀಳೋದು ಬಾಕಿ ಇದೆ.‌

ಆದರೆ ಡಾಕ್ಟರಮ್ಮನ ಪ್ರೀತಿಗೆ ಬಿದ್ದಿದ್ದ ಯುವಕ ಬೀದಿ ಹೆಣವಾಗಿದ್ದು ಮಾತ್ರ ದುರ್ದೈವ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago