ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವವನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾರ್ ಮಾತನಾಡುತ್ತಾ… ಭಗೀರಥ ಮಹರ್ಷಿ ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮರ ಸಮುದಾಯದಲ್ಲಿ ಜನಿಸಿದ ನಾವೇ ಧನ್ಯರು. ಭೂಮಿಯ ಮೇಲಿನ ಕೋಟ್ಯಾಂತರ ಜೀವರಾಶಿಗಳಿಗೆ ಅತ್ಯಗತ್ಯವಾದ ಜೀವಜಲ ತಂದುಕೊಟ್ಟಂತಹ ಮಹರ್ಷಿ ಶ್ರೀ ಭಗೀರಥರ ಜಯಂತೋತ್ಸವನ್ನು ರಾಜ್ಯಾದ್ಯಂತ ಆಚರಿಸುವ ಭಾಗ್ಯ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಆಚರಿಸುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.
ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಮಾತನಾಡಿ, ರಾಜ್ಯಾದ್ಯಂತ ನೆಲೆಸಿರುವ ಉಪ್ಪಾರ ಸಮುದಾಯ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದುವರೆಯಬೇಕಿದೆ. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದರೊಂದಿಗೆ ಸರ್ಕಾರಿ ಅಧಿಕಾರಿಗಳನ್ನಾಗಿ ರೂಪಿಸಿ ಸಮಾಜದಲ್ಲಿ ಗೌರವವನ್ನು ಪಡೆದು ಸಮುದಾಯದ ಏಳ್ಗೆಗೆ ಮುಂದಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕ ಅಧ್ಯಕ್ಷ ಕೆ.ಪ್ರಕಾಶ್, ತಾಲ್ಲೂಕು ಅಧ್ಯಕ್ಷ ಪಿ.ಎಂ.ಪ್ರಕಾಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷಿನಾರಾಯಣ್, ಶ್ರೀನಿವಾಸ ಬಾಬು, ಚಂದ್ರಶೇಖರ್, ಕೃಷ್ಣಮೂರ್ತಿ, ರಾಮರಾಜ್, ಪಂಚಾಯ್ತಿ ಸದಸ್ಯರಾದ ಉಮೇಶ್, ಸುರೇಶ್ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…