ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮ ಶ್ರೀ ಭಗೀರಥ ಮಹರ್ಷಿ- ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾರ್ ಹೇಳಿಕೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವವನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾರ್ ಮಾತನಾಡುತ್ತಾ… ಭಗೀರಥ ಮಹರ್ಷಿ ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮರ ಸಮುದಾಯದಲ್ಲಿ ಜನಿಸಿದ ನಾವೇ ಧನ್ಯರು. ಭೂಮಿಯ ಮೇಲಿನ ಕೋಟ್ಯಾಂತರ ಜೀವರಾಶಿಗಳಿಗೆ ಅತ್ಯಗತ್ಯವಾದ ಜೀವಜಲ ತಂದುಕೊಟ್ಟಂತಹ ಮಹರ್ಷಿ ಶ್ರೀ ಭಗೀರಥರ ಜಯಂತೋತ್ಸವನ್ನು ರಾಜ್ಯಾದ್ಯಂತ ಆಚರಿಸುವ ಭಾಗ್ಯ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಆಚರಿಸುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.

ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಮಾತನಾಡಿ, ರಾಜ್ಯಾದ್ಯಂತ ನೆಲೆಸಿರುವ ಉಪ್ಪಾರ ಸಮುದಾಯ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದುವರೆಯಬೇಕಿದೆ. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದರೊಂದಿಗೆ ಸರ್ಕಾರಿ ಅಧಿಕಾರಿಗಳನ್ನಾಗಿ ರೂಪಿಸಿ ಸಮಾಜದಲ್ಲಿ ಗೌರವವನ್ನು ಪಡೆದು ಸಮುದಾಯದ ಏಳ್ಗೆಗೆ ಮುಂದಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕ ಅಧ್ಯಕ್ಷ ಕೆ.ಪ್ರಕಾಶ್, ತಾಲ್ಲೂಕು ಅಧ್ಯಕ್ಷ ಪಿ.ಎಂ.ಪ್ರಕಾಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷಿನಾರಾಯಣ್, ಶ್ರೀನಿವಾಸ ಬಾಬು, ಚಂದ್ರಶೇಖರ್, ಕೃಷ್ಣಮೂರ್ತಿ, ರಾಮರಾಜ್, ಪಂಚಾಯ್ತಿ ಸದಸ್ಯರಾದ ಉಮೇಶ್, ಸುರೇಶ್ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

3 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

17 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

18 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

19 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

19 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

23 hours ago