ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವವನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾರ್ ಮಾತನಾಡುತ್ತಾ… ಭಗೀರಥ ಮಹರ್ಷಿ ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮರ ಸಮುದಾಯದಲ್ಲಿ ಜನಿಸಿದ ನಾವೇ ಧನ್ಯರು. ಭೂಮಿಯ ಮೇಲಿನ ಕೋಟ್ಯಾಂತರ ಜೀವರಾಶಿಗಳಿಗೆ ಅತ್ಯಗತ್ಯವಾದ ಜೀವಜಲ ತಂದುಕೊಟ್ಟಂತಹ ಮಹರ್ಷಿ ಶ್ರೀ ಭಗೀರಥರ ಜಯಂತೋತ್ಸವನ್ನು ರಾಜ್ಯಾದ್ಯಂತ ಆಚರಿಸುವ ಭಾಗ್ಯ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಆಚರಿಸುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.
ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಮಾತನಾಡಿ, ರಾಜ್ಯಾದ್ಯಂತ ನೆಲೆಸಿರುವ ಉಪ್ಪಾರ ಸಮುದಾಯ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದುವರೆಯಬೇಕಿದೆ. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದರೊಂದಿಗೆ ಸರ್ಕಾರಿ ಅಧಿಕಾರಿಗಳನ್ನಾಗಿ ರೂಪಿಸಿ ಸಮಾಜದಲ್ಲಿ ಗೌರವವನ್ನು ಪಡೆದು ಸಮುದಾಯದ ಏಳ್ಗೆಗೆ ಮುಂದಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕ ಅಧ್ಯಕ್ಷ ಕೆ.ಪ್ರಕಾಶ್, ತಾಲ್ಲೂಕು ಅಧ್ಯಕ್ಷ ಪಿ.ಎಂ.ಪ್ರಕಾಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷಿನಾರಾಯಣ್, ಶ್ರೀನಿವಾಸ ಬಾಬು, ಚಂದ್ರಶೇಖರ್, ಕೃಷ್ಣಮೂರ್ತಿ, ರಾಮರಾಜ್, ಪಂಚಾಯ್ತಿ ಸದಸ್ಯರಾದ ಉಮೇಶ್, ಸುರೇಶ್ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…