ತನ್ನ ಸಾಕುನಾಯಿಯನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ 20 ಬೀದಿ ನಾಯಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಕಿರಾತಕ

ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪೊನ್ನಕಲ್ ಗ್ರಾಮದಲ್ಲಿ ಬೀದಿನಾಯಿಗಳ ಗುಂಪನ್ನು ಕೊಂದ ಆರೊಪದ‌ ಮೇಲೆ ಹೈದರಾಬಾದ್‌ನ ಶೂಟರ್ ಸೇರಿದಂತೆ ಮೂವರನ್ನು ಅಡ್ಡಂಕಲ್ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಫೆಬ್ರವರಿ ಆರಂಭದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಬೀದಿನಾಯಿಗಳು ಕೊಂದ ನಂತರ ಆರೋಪಿಗಳು ಫೆಬ್ರವರಿ 16 ರಂದು 20 ಬೀದಿ ನಾಯಿಗಳನ್ನು ಕೊಂದು ಸೇಡು ತೀರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

57 ವರ್ಷದ ರೈತ ಮಂದಾ ನರಸಿಂಹ ರೆಡ್ಡಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಶೂಟರ್ ತಾರೀಕ್ ಅಹ್ಮದ್ (42) ಮತ್ತು ಜಿಮ್ ಮಾಲೀಕ ಮೊಹಮ್ಮದ್ ತಾಹೆರ್ (40) ಅವರಿಗೆ ಸಹಾಯ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.  ನರಸಿಂಹ ರೆಡ್ಡಿ ಅವರು ಬೀದಿನಾಯಿಗಳನ್ನು ಕೊಲ್ಲಲು ತಾರೀಕ್ ಅವರ ಪರವಾನಗಿ ಪಡೆದ ಎ.22 ರೈಫಲ್ ಅನ್ನು ಬಳಸಿದ್ದರು ಎನ್ನಲಾಗಿದೆ.

ನರಸಿಂಹ ರೆಡ್ಡಿ ಅವರ ಅತ್ತೆಯ ಮನೆಗೆ ಭೇಟಿ ನೀಡಿದ್ದರು, ಅಲ್ಲಿ ಬೀದಿ ನಾಯಿಗಳು ಫೆಬ್ರವರಿ ಮೊದಲ ವಾರದಲ್ಲಿ ಅವರ ಸಾಕು ನಾಯಿ ಮಿಂಟುವನ್ನು ಕೊಂದು ಮತ್ತೊಂದು ಸಾಕು ನಾಯಿ ಜೇಡ್ ಅನ್ನು ಗಾಯಗೊಳಿಸಿದ್ದವು.

ನಂತರ, ಫೆಬ್ರವರಿ 16 ರ ಮುಂಜಾನೆ, ನರಸಿಂಹ ರೆಡ್ಡಿ ಸೇರಿ ಮೂವರು ನಾಯಿಗಳ ಗುಂಪಿನ‌ ಮೇಲೆ ಗುಂಡಿನ ದಾಳಿ ನಡೆಸಿದರು.

ಸದ್ಯ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು‌ ದಾಖಲಿಸಲಾಗಿದೆ.

Ramesh Babu

Journalist

Recent Posts

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

5 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

8 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago