ತೆಲಂಗಾಣದ ಮಹಬೂಬ್ನಗರ ಜಿಲ್ಲೆಯ ಪೊನ್ನಕಲ್ ಗ್ರಾಮದಲ್ಲಿ ಬೀದಿನಾಯಿಗಳ ಗುಂಪನ್ನು ಕೊಂದ ಆರೊಪದ ಮೇಲೆ ಹೈದರಾಬಾದ್ನ ಶೂಟರ್ ಸೇರಿದಂತೆ ಮೂವರನ್ನು ಅಡ್ಡಂಕಲ್ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಫೆಬ್ರವರಿ ಆರಂಭದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಬೀದಿನಾಯಿಗಳು ಕೊಂದ ನಂತರ ಆರೋಪಿಗಳು ಫೆಬ್ರವರಿ 16 ರಂದು 20 ಬೀದಿ ನಾಯಿಗಳನ್ನು ಕೊಂದು ಸೇಡು ತೀರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
57 ವರ್ಷದ ರೈತ ಮಂದಾ ನರಸಿಂಹ ರೆಡ್ಡಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಶೂಟರ್ ತಾರೀಕ್ ಅಹ್ಮದ್ (42) ಮತ್ತು ಜಿಮ್ ಮಾಲೀಕ ಮೊಹಮ್ಮದ್ ತಾಹೆರ್ (40) ಅವರಿಗೆ ಸಹಾಯ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ. ನರಸಿಂಹ ರೆಡ್ಡಿ ಅವರು ಬೀದಿನಾಯಿಗಳನ್ನು ಕೊಲ್ಲಲು ತಾರೀಕ್ ಅವರ ಪರವಾನಗಿ ಪಡೆದ ಎ.22 ರೈಫಲ್ ಅನ್ನು ಬಳಸಿದ್ದರು ಎನ್ನಲಾಗಿದೆ.
ನರಸಿಂಹ ರೆಡ್ಡಿ ಅವರ ಅತ್ತೆಯ ಮನೆಗೆ ಭೇಟಿ ನೀಡಿದ್ದರು, ಅಲ್ಲಿ ಬೀದಿ ನಾಯಿಗಳು ಫೆಬ್ರವರಿ ಮೊದಲ ವಾರದಲ್ಲಿ ಅವರ ಸಾಕು ನಾಯಿ ಮಿಂಟುವನ್ನು ಕೊಂದು ಮತ್ತೊಂದು ಸಾಕು ನಾಯಿ ಜೇಡ್ ಅನ್ನು ಗಾಯಗೊಳಿಸಿದ್ದವು.
ನಂತರ, ಫೆಬ್ರವರಿ 16 ರ ಮುಂಜಾನೆ, ನರಸಿಂಹ ರೆಡ್ಡಿ ಸೇರಿ ಮೂವರು ನಾಯಿಗಳ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…