ತನ್ನ ಸಾಕುನಾಯಿಯನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ 20 ಬೀದಿ ನಾಯಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಕಿರಾತಕ

ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪೊನ್ನಕಲ್ ಗ್ರಾಮದಲ್ಲಿ ಬೀದಿನಾಯಿಗಳ ಗುಂಪನ್ನು ಕೊಂದ ಆರೊಪದ‌ ಮೇಲೆ ಹೈದರಾಬಾದ್‌ನ ಶೂಟರ್ ಸೇರಿದಂತೆ ಮೂವರನ್ನು ಅಡ್ಡಂಕಲ್ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಫೆಬ್ರವರಿ ಆರಂಭದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಬೀದಿನಾಯಿಗಳು ಕೊಂದ ನಂತರ ಆರೋಪಿಗಳು ಫೆಬ್ರವರಿ 16 ರಂದು 20 ಬೀದಿ ನಾಯಿಗಳನ್ನು ಕೊಂದು ಸೇಡು ತೀರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

57 ವರ್ಷದ ರೈತ ಮಂದಾ ನರಸಿಂಹ ರೆಡ್ಡಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಶೂಟರ್ ತಾರೀಕ್ ಅಹ್ಮದ್ (42) ಮತ್ತು ಜಿಮ್ ಮಾಲೀಕ ಮೊಹಮ್ಮದ್ ತಾಹೆರ್ (40) ಅವರಿಗೆ ಸಹಾಯ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.  ನರಸಿಂಹ ರೆಡ್ಡಿ ಅವರು ಬೀದಿನಾಯಿಗಳನ್ನು ಕೊಲ್ಲಲು ತಾರೀಕ್ ಅವರ ಪರವಾನಗಿ ಪಡೆದ ಎ.22 ರೈಫಲ್ ಅನ್ನು ಬಳಸಿದ್ದರು ಎನ್ನಲಾಗಿದೆ.

ನರಸಿಂಹ ರೆಡ್ಡಿ ಅವರ ಅತ್ತೆಯ ಮನೆಗೆ ಭೇಟಿ ನೀಡಿದ್ದರು, ಅಲ್ಲಿ ಬೀದಿ ನಾಯಿಗಳು ಫೆಬ್ರವರಿ ಮೊದಲ ವಾರದಲ್ಲಿ ಅವರ ಸಾಕು ನಾಯಿ ಮಿಂಟುವನ್ನು ಕೊಂದು ಮತ್ತೊಂದು ಸಾಕು ನಾಯಿ ಜೇಡ್ ಅನ್ನು ಗಾಯಗೊಳಿಸಿದ್ದವು.

ನಂತರ, ಫೆಬ್ರವರಿ 16 ರ ಮುಂಜಾನೆ, ನರಸಿಂಹ ರೆಡ್ಡಿ ಸೇರಿ ಮೂವರು ನಾಯಿಗಳ ಗುಂಪಿನ‌ ಮೇಲೆ ಗುಂಡಿನ ದಾಳಿ ನಡೆಸಿದರು.

ಸದ್ಯ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು‌ ದಾಖಲಿಸಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago