ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗಿನ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.
ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ, ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ ಎಂದರು.
ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…