ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗಿನ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.
ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ, ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ ಎಂದರು.
ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…