ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಮಲೈ ಅವರು ರಾಜೀನಾಮೆ ನೀಡಿರುವ ಮಾಹಿತಿ ಒದಗಿಬಂದಿದೆ.
ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕೆ.ಅಣ್ಣಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಎರಡು ದಿನಗಳ ಹಿಂದೆಯೇ ಕೆ.ಅಣ್ಣಮಲೈ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ರಾಜಕೀಯ ಮೂಲಗಳು ಹೇಳಿದ್ದವು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ಈ ನಿರ್ಧಾರವನ್ನು ತಿಳಿಸಲಾಗಿತ್ತು. ಅದರಂತೆ ಈಗ ಕೆ.ಅಣ್ಣಮಲೈ ಅವರು ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಬಳಿಕ ಮಾತನಾಡಿದ ಕೆ.ಅಣ್ಣಮಲೈ ಅವರು, ಈಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನಾನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ನೂತನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಯಾರನ್ನೂ ಸೂಚಿಸಿಲ್ಲ. ಈ ಮಣ್ಣನ್ನ ಬಿಟ್ಟು ನಾನು ಎಲ್ಲಿಗೂ ಹೋಗಲ್ಲ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ನಲ್ಲಿ ನಾನು ಇಲ್ಲ. ಈ ಪಕ್ಷ ಚೆನ್ನಾಗಿರಬೇಕು. ಏಕೆಂದರೆ ಈ ಪಕ್ಷದಲ್ಲಿ ಎಲ್ಲ ಒಳ್ಳೆಯವರೇ ಇದ್ದಾರೆ. ಈ ಪಕ್ಷಕ್ಕಾಗಿ ಸಾಕಷ್ಟು ಜನ ಉಸಿರು ಕೊಟ್ಟಿದ್ದಾರೆ. ಬಿಜೆಪಿ ನೂತನ ಅಧ್ಯಕ್ಷರನ್ನ ಆಯ್ಕೆ ಮಾಡುವಾಗ ಇನ್ನಷ್ಟು ಮಾತನಾಡುತ್ತೇನೆ ಎಂದು ಅಣ್ಣಮಲೈ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…