ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ: ಸಹೋದ್ಯೋಗಿಗಳಿಂದಲೇ ಕೊಲೆಯಾಗಿರುವ ಶಂಕೆ

ಮೂರು ದಿನಗಳ ಹಿಂದೆ ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪತಾಂಜಲಿ ಸ್ಟೋರ್ ಸಮೀಪದ ಕೋಣೆಯೊಂದರಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ನಿವಾಸಿ ದೀಪಾ(40), ಮೃತ ದುರ್ದೈವಿ. ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ದೀಪಾಳ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಸಹೋದ್ಯೋಗಿಗಳಿಂದಲೇ ಗೃಹಿಣಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಹೋದ್ಯೋಗಿ ದಿವಾಕರ್ ವಾಸವಿದ್ದ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವುದರಿಂದ ಹಲವು ಅನುಮಾನಗಳನ್ನ ಹುಟ್ಟುಹಾಕಿದೆ.

ಸದ್ಯ ಘಟನೆ ನಂತರ ದೀಪಾ ಸಹೋದ್ಯೋಗಿಗಳಾದ ದಿವಾಕರ್ ಹಾಗೂ ಸುರೇಶ್ ತಲೆಮರೆಸಿಕೊಂಡಿದ್ದಾರೆ.

ಬೇಕರಿಯೊಂದರಲ್ಲಿ ದೀಪಾ, ದಿವಾಕರ್ ಹಾಗೂ ಸುರೇಶ್ ಒಟ್ಟಿಗೆ ಕೆಲಸ ಮಾಡುತ್ತಿದ್ದರು.

ಸುರೇಶ್ ಹಾಗೂ ದಿವಾಕರ್ ಜೊತೆ ದೀಪಾ ಹಣಕಾಸಿನ ವ್ಯವಹಾರ ಮಾಡಿದ್ದರು. ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಮೂಡಿ ಕೊಲೆಯಾಗಿರುವ ಶಂಕೆವ್ಯಕ್ತವಾಗಿದೆ.

ಸದ್ಯ ಚಿಕ್ಕಬಳ್ಳಾಪುರ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago