ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು.
ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಇದಕ್ಕಾಗಿ ನೀವು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರ ಸಾಲ ಮಾಡಿದೆ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ವಿತ್ತೀಯ ಹೊಣೆಗಾರಿಕಾ ಕಾಯ್ದೆಯ ಮಾನದಂಡಗಳನ್ನು ಮೀರಿ ನಾವು ಸಾಲ ಮಾಡಿಲ್ಲ. ಈ ಸತ್ಯವನ್ನು ಬಿಜೆಪಿ ಹೇಳುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಬರಲಿಲ್ಲ. ಜೊತೆಗೆ ಜಿಎಸ್ಟಿ ಮೂಲಕ ನಮಗೆ ಬರಬೇಕಿದ್ದ ತೆರಿಗೆ ಕೇಂದ್ರದ ಅವೈಜ್ಞಾನಿಕ ನೀತಿಯಿಂದಾಗಿ 10 ಸಾವಿರ ಕೋಟಿ ಕಡಿಮೆಯಾಯಿತು. ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿಲ್ಲ. ಜೊತೆಗೆ ಅಭಿವೃದ್ಧಿ ಕೆಲಸಗಳನ್ನೂ ಮುಂದುವರೆಸಿದ್ದೇವೆ. ಹೀಗಾಗಿ ನಮ್ಮದು ನುಡಿದಂತೆ ನಡೆದ ಪಕ್ಷ ಎಂದರು.
ಅಧಿಕಾರ ಇದ್ದಾಗ ಕೆಲಸ ಮಾಡದೆ ಈ ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ಗೆ ನಿಮ್ಮ ಮತ ಪಡೆಯುವ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದವರಿಗೆ ನಿಮ್ಮ ಮತ ಕೊಡಬೇಡಿ ಎಂದು ಹೇಳಿದ್ದಾರೆ.
ಚನ್ನಪಟ್ಟಣ, ಶಿಗ್ಗಾಂವ್, ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಪಪ್ರಚಾರದ ನಡುವೆಯೂ ಗೆದ್ದಿದ್ದು ಕಾಂಗ್ರೆಸ್ ಪಕ್ಷವೇ. ಈ ಚುನಾವಣೆಯಲ್ಲೂ ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಜೊತೆಗೆ 2028ಕ್ಕೂ ನಾವೇ ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ.
ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಅಷ್ಟೆ ಎಂದರು.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ, ಕರ್ನಾಟಕದಲ್ಲಿ ಬಿಜೆಪಿ ಎಂಥಾ ಹೀನಾಯ ಸ್ಥಿತಿಯಲ್ಲಿದೆ ಎಂಬುದಕ್ಕಿದು ಸಾಕ್ಷಿ ಎಂದರು.
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿದ್ದಾರೆ, ಆದರೆ ಇವರು ನಿಜವಾಗಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.
ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ್ ಅವರ ಮಾತು ದ್ವೇಷ ರಾಜಕೀಯದಿಂದ ಕೂಡಿದ್ದು. ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ 14% ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…