ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು.
ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಇದಕ್ಕಾಗಿ ನೀವು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರ ಸಾಲ ಮಾಡಿದೆ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ವಿತ್ತೀಯ ಹೊಣೆಗಾರಿಕಾ ಕಾಯ್ದೆಯ ಮಾನದಂಡಗಳನ್ನು ಮೀರಿ ನಾವು ಸಾಲ ಮಾಡಿಲ್ಲ. ಈ ಸತ್ಯವನ್ನು ಬಿಜೆಪಿ ಹೇಳುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬರಲಿಲ್ಲ. ಜೊತೆಗೆ ಜಿಎಸ್‌ಟಿ ಮೂಲಕ ನಮಗೆ ಬರಬೇಕಿದ್ದ ತೆರಿಗೆ ಕೇಂದ್ರದ ಅವೈಜ್ಞಾನಿಕ ನೀತಿಯಿಂದಾಗಿ 10 ಸಾವಿರ ಕೋಟಿ ಕಡಿಮೆಯಾಯಿತು. ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿಲ್ಲ. ಜೊತೆಗೆ ಅಭಿವೃದ್ಧಿ ಕೆಲಸಗಳನ್ನೂ ಮುಂದುವರೆಸಿದ್ದೇವೆ. ಹೀಗಾಗಿ ನಮ್ಮದು ನುಡಿದಂತೆ ನಡೆದ ಪಕ್ಷ ಎಂದರು.

ಅಧಿಕಾರ ಇದ್ದಾಗ ಕೆಲಸ ಮಾಡದೆ ಈ ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ಗೆ ನಿಮ್ಮ ಮತ ಪಡೆಯುವ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದವರಿಗೆ ನಿಮ್ಮ ಮತ ಕೊಡಬೇಡಿ ಎಂದು ಹೇಳಿದ್ದಾರೆ.

ಚನ್ನಪಟ್ಟಣ, ಶಿಗ್ಗಾಂವ್, ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಪಪ್ರಚಾರದ ನಡುವೆಯೂ ಗೆದ್ದಿದ್ದು ಕಾಂಗ್ರೆಸ್ ಪಕ್ಷವೇ. ಈ ಚುನಾವಣೆಯಲ್ಲೂ ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಜೊತೆಗೆ 2028ಕ್ಕೂ ನಾವೇ ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ.
ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ‌ ಅಷ್ಟೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ, ಕರ್ನಾಟಕದಲ್ಲಿ ಬಿಜೆಪಿ ಎಂಥಾ ಹೀನಾಯ ಸ್ಥಿತಿಯಲ್ಲಿದೆ ಎಂಬುದಕ್ಕಿದು ಸಾಕ್ಷಿ ಎಂದರು.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿದ್ದಾರೆ, ಆದರೆ ಇವರು ನಿಜವಾಗಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ್ ಅವರ ಮಾತು ದ್ವೇಷ ರಾಜಕೀಯದಿಂದ ಕೂಡಿದ್ದು. ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ 14% ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

12 hours ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

16 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

18 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

19 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

22 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

2 days ago