ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು.
ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಇದಕ್ಕಾಗಿ ನೀವು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರ ಸಾಲ ಮಾಡಿದೆ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ವಿತ್ತೀಯ ಹೊಣೆಗಾರಿಕಾ ಕಾಯ್ದೆಯ ಮಾನದಂಡಗಳನ್ನು ಮೀರಿ ನಾವು ಸಾಲ ಮಾಡಿಲ್ಲ. ಈ ಸತ್ಯವನ್ನು ಬಿಜೆಪಿ ಹೇಳುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬರಲಿಲ್ಲ. ಜೊತೆಗೆ ಜಿಎಸ್‌ಟಿ ಮೂಲಕ ನಮಗೆ ಬರಬೇಕಿದ್ದ ತೆರಿಗೆ ಕೇಂದ್ರದ ಅವೈಜ್ಞಾನಿಕ ನೀತಿಯಿಂದಾಗಿ 10 ಸಾವಿರ ಕೋಟಿ ಕಡಿಮೆಯಾಯಿತು. ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿಲ್ಲ. ಜೊತೆಗೆ ಅಭಿವೃದ್ಧಿ ಕೆಲಸಗಳನ್ನೂ ಮುಂದುವರೆಸಿದ್ದೇವೆ. ಹೀಗಾಗಿ ನಮ್ಮದು ನುಡಿದಂತೆ ನಡೆದ ಪಕ್ಷ ಎಂದರು.

ಅಧಿಕಾರ ಇದ್ದಾಗ ಕೆಲಸ ಮಾಡದೆ ಈ ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ಗೆ ನಿಮ್ಮ ಮತ ಪಡೆಯುವ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದವರಿಗೆ ನಿಮ್ಮ ಮತ ಕೊಡಬೇಡಿ ಎಂದು ಹೇಳಿದ್ದಾರೆ.

ಚನ್ನಪಟ್ಟಣ, ಶಿಗ್ಗಾಂವ್, ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಪಪ್ರಚಾರದ ನಡುವೆಯೂ ಗೆದ್ದಿದ್ದು ಕಾಂಗ್ರೆಸ್ ಪಕ್ಷವೇ. ಈ ಚುನಾವಣೆಯಲ್ಲೂ ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಜೊತೆಗೆ 2028ಕ್ಕೂ ನಾವೇ ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ.
ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ‌ ಅಷ್ಟೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ, ಕರ್ನಾಟಕದಲ್ಲಿ ಬಿಜೆಪಿ ಎಂಥಾ ಹೀನಾಯ ಸ್ಥಿತಿಯಲ್ಲಿದೆ ಎಂಬುದಕ್ಕಿದು ಸಾಕ್ಷಿ ಎಂದರು.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿದ್ದಾರೆ, ಆದರೆ ಇವರು ನಿಜವಾಗಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ್ ಅವರ ಮಾತು ದ್ವೇಷ ರಾಜಕೀಯದಿಂದ ಕೂಡಿದ್ದು. ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ 14% ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

3 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

9 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

15 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

16 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago