ತಲಾ ಆದಾಯದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿರಲು ಗ್ಯಾರಂಟಿಗಳೇ ಕಾರಣ- ಇಂಧನ ಸಚಿವ ಕೆ.ಜೆ.ಜಾರ್ಜ್‌

ತಲಾ ಆದಾಯದಲ್ಲಿ ನಮ್ಮ ರಾಜ್ಯವು ದೇಶದಲ್ಲೇ ಮೊದಲ ಸ್ಥಾನದಲ್ಲಿರಲು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಡಾ.ಬಿ.ಅರ್. ಅಂಬೇಡ್ಕರ್ ವೈದ್ಯಕೀಯ ಮತ್ತು ಆಸ್ಪತ್ರೆ ಸಮೂಹ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.

“ತ್ಯಾಗ ಮತ್ತು ಮಮತೆಯ ಪ್ರತೀಕ ಎನಿಸಿರುವ ಮಹಿಳೆಯರಿಗೆ ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ‌ ಆರ್ಥಿಕ ಶಕ್ತಿ ತುಂಬಿದೆ. ಇದರಿಂದಾಗಿಯೇ ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಿದ್ದೇವೆ ಎಂದು ಹೇಳಲು ಹೆಮ್ಮೆಯಾಗುತ್ತದೆ. ಯೋಜನೆಗಳಿಂದ ಒಂದು ಕುಟುಂಬಕ್ಕೆ ಸುಮಾರು ಐದು ಸಾವಿರದ ಐನೂರು ರೂಪಾಯಿ ಸಂದಾಯ ಆಗಲಿದೆ. ಇದರಿಂದ ಕುಟುಂಬಗಳು ಸಬಲವಾಗುವ ಜತೆಗೆ ರಾಜ್ಯದ ಆರ್ಥಿಕ ವಹಿವಾಟಿನಲ್ಲೂ ಏರಿಕೆ ಕಂಡಿದೆ. ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಮುಖ್ಯವಾಗಿ ಜನರ ಖರೀದಿ ಶಕ್ತಿ ಹೆಚ್ಚಿದೆ,”ಎಂದು ಹೇಳಿದರು.

“ಇಂದಿರಾ ಗಾಂಧಿ ಅವರು ಹೇಳಿದಂತೆ ಸರ್ಕಾರವು ಎಲ್ಲರನ್ನೊಳಗೊಳ್ಳುವ ಸರ್ಕಾರವಾಗಬೇಕು. ಸಂಪತ್ತು ಕೇವಲ‌ ಒಂದು ವರ್ಗದ ಸ್ವತ್ತಾಗದೆ, ಸಮರ್ಪಕವಾಗಿ ಹಂಚಿಕೆ ಆಗಬೇಕು. ಹಾಗಿದಾಗ ಮಾತ್ರವೇ ಪ್ರಜಾಪ್ರಭುತ್ವಕ್ಕೆ ಅರ್ಥ ಬರುವುದು,” ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ಆರಂಭವನ್ನು ವಿವರಿಸಿದ ಇಂಧನ ಸಚಿವರು, “ಪ್ರಜಾಪ್ರಭುತ್ವದ ಉಳಿವಿಗಾಗಿ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು 3200 ಕಿಲೋ ಮೀಟರ್ ಭಾರತ್ ಜೋಡೋ ಪಾದಯಾತ್ರೆ ಕೈಗೊಂಡರು. ಕರ್ನಾಟಕಕ್ಕೆ ಬಂದಾಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಜತೆ ಇದ್ದರು. ಪಾದಯಾತ್ರೆ ವೇಳೆ ದೇಶದ ಎಲ್ಲ ಸ್ತರದ ಜನರನ್ನು ಮುಖಾಮುಖಿಯಾಗಿ ಮಾತನಾಡಿಸಿ ಅವರ ಕಷ್ಟ ವಿಚಾರಿಸಿದರು. ಕೋವಿಡ್ ಬಳಿಕ ಕಷ್ಟದಲ್ಲಿರುವ ಜನರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿ ಎಂದು ರಾಹುಲ್‌ ಗಾಂಧಿ ಅವರು ನಮಗೆ ಹೇಳಿದ್ದರು, ಅದರಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಅಶಕ್ತರಿಗೆ ಶಕ್ತಿ ತುಂಬಲಾಗಿದೆ,” ಎಂದರು.

*ಕೋವಿಡ್ ಕಾಲದ ಆಪ್ತ ಅಂಬೇಡ್ಕರ್ ಕಾಲೇಜ್*

“ಎರಡನೇ ಹಂತದ ಕೋವಿಡ್‌ ವೇಳೆ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ಸಮಸ್ಯೆ ಆಯಿತು. ಆಗ ನಮ್ಮ ಕ್ಷೇತ್ರದಲ್ಲಿರುವ ಅಂಬೇಡ್ಕರ್ ಕಾಲೇಜು ನಮ್ಮ ನೆರವಿಗೆ ನಿಂತು, ಬಡವರಿಗೆ ಆರೋಗ್ಯ ಸೇವೆ ಒದಗಿಸಿತು. ಕಾಲೇಜಿನ ಪ್ರಾಂಶುಪಾಲರು 120 ಹಾಸಿಗೆಗಳ ವಾರ್ಡ್ ಸಿದ್ದ ಮಾಡಿಕೊಟ್ಟರು. ಇದಕ್ಕೆ ಅವರಿಗ ನಾನು ಚಿರಋಣಿಯಾಗಿರುತ್ತೇನೆ,”ಎಂದು ಕೃತಜ್ಞತೆ ಸಲ್ಲಿಸಿದರು.

*ಶಿಕ್ಷಣ, ಆರೋಗ್ಯ ಸರ್ವಜ್ಞ ನಗರದ ಅಭಿವೃದ್ದಿ ಗುರಿ*

“ಸರ್ವಜ್ಞ ನಗರ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಗುಣಮಟ್ಟದ ಸೇವೆ ಒದಗಸುತ್ತಿರುವ ಅಂಗನವಾಡಿಗಳು, ಶಾಲೆಗಳು ಬಡವರಿಗೆ ವಿಶ್ವಾಸ ಮೂಡಿಸಿವೆ. 120 ಹಾಸಿಗೆಯ ಆಸ್ಪತ್ರೆ ಇನ್ನೆರೆಡು ತಿಂಗಳಲ್ಲಿ ಸಿದ್ದವಾಗಲಿದೆ. ಇದೆಲ್ಲ ಅಂಬೇಡ್ಕರ್ ಅವರ ಸಂವಿಧಾನ ತತ್ತ್ವದ ಆಧಾರದ ಮೇಲೆ ನಡೆಯುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ,” ಎಂದು ತಿಳಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

13 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

18 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago