ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮಬಲ ಹೋರಾಟದ ಪಂದ್ಯದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಚಿತ್ತಾರ ಮೂಲೆ-ಮೂಲೆಯಲ್ಲೂ ಬಿಡಿಸಿದ್ದರೂ ಕೊನೆಯ ಓವರ್ ನಲ್ಲಿ ಗೆಲುವು ಮಹೇಂದ್ರ ಸಿಂಗ್ ದೋನಿ ನಾಯಕತ್ವದ ಸಿಎಸ್ ಕೆ ಪಾಲಾಯಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಯಶಸ್ವಿ ಆರಂಭಿಕ ಜೋಡಿಯಾದ ಡೇವಿಡ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲು ಬಿಡಲಿಲ್ಲ, ಮೊಹಮ್ಮದ್ ಸಿರಾಜ್ ಅವರ ಮೊದಲ ಓವರ್ ನಲ್ಲಿಯೇ ಗಾಯಕ್ವಾಡ್ (3) ರನ್ ಗಳಿಸಿ ಔಟಾದರು.
ಇಪ್ಪತ್ತು ಓವರುಗಳಲ್ಲಿ 224 ರನ್ ಗೆಲುವಿನ ಗುರಿ ನೀಡಿದರು, ಆರ್ ಸಿಬಿ ಪರವಾಗಿ ಬೌಲಿಂಗ್ ಮಾಡಿದ ಎಲ್ಲಾ ವೇಗಿಗಳು ದುಬಾರಿಯಾದರು.
ಬೃಹತ್ ಮೊತ್ತ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್ಮನ್ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ (6) ಆಕಾಶ್ ಸಿಂಗ್ ಗೆ ವಿಕೆಟ್ ಒಪ್ಪಿಸಿದರು, ಮತ್ತೊಬ್ಬ ಬ್ಯಾಟ್ಸ್ಮನ್ ಮಹಿಪಾಲ್ ಲೋಮರ್(0) ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು 15 ರನ್ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಸಂದರ್ಭದಲ್ಲಿ ಜೊತೆಯಾದ ನಾಯಕ ಪಾಫ್ ಡುಪ್ಲೆಸಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (62) ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ (76) ರನ್ ಗಳಿಸುವ ಮೂಲಕ 126 ರನ್ ಜೊತೆಯಾಟ ಆಡಿದರು. ಒಂದು ಹಂತದಲ್ಲಿ ಗೆಲುವಿನ ಹತ್ತಿರ ಕೊಂಡೊಯ್ಯುವ ಪ್ರಯತ್ನ ಮಾಡಿದರು.
ನಂತರ ಹಂತ ಹಂತವಾಗಿ ವಿಕೆಟ್ ಕಳೆದುಕೊಂಡರು, ಚೆನ್ನೈ ತಂಡದ ಪರವಾಗಿ ತುಷಾರ್ ದೇಶಪಾಂಡೆ 3 ವಿಕೆಟ್ ಹಾಗೂ ಮತೀಷಾ ಪ್ರತೀರಾಣ 2 ವಿಕೆಟ್ ಪಡೆದು ಗಮನ ಸೆಳೆದರು, ಅದ್ಭುತವಾದ ಬ್ಯಾಟಿಂಗ್ ಮಾಡಿದ ಡೆವೊನ್ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…