Categories: ಐಪಿಎಲ್

ತವರಿನಲ್ಲಿ ಆರ್ ಸಿಬಿಗೆ ಆಘಾತ, ಚೆನ್ನೈಗೆ ಭರ್ಜರಿ ಗೆಲುವು!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮಬಲ ಹೋರಾಟದ ಪಂದ್ಯದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಚಿತ್ತಾರ ಮೂಲೆ-ಮೂಲೆಯಲ್ಲೂ ಬಿಡಿಸಿದ್ದರೂ ಕೊನೆಯ ಓವರ್ ನಲ್ಲಿ ಗೆಲುವು ಮಹೇಂದ್ರ ಸಿಂಗ್ ದೋನಿ ನಾಯಕತ್ವದ ಸಿಎಸ್ ಕೆ ಪಾಲಾಯಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಯಶಸ್ವಿ ಆರಂಭಿಕ ಜೋಡಿಯಾದ ಡೇವಿಡ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲು ಬಿಡಲಿಲ್ಲ, ಮೊಹಮ್ಮದ್ ಸಿರಾಜ್ ಅವರ ಮೊದಲ ಓವರ್ ನಲ್ಲಿಯೇ ಗಾಯಕ್ವಾಡ್ (3) ರನ್ ಗಳಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಕಾನ್ವೆ ಆರು ಸಿಕ್ಸರ್ ಹಾಗೂ ಆರು ಬೌಂಡರಿ ಸಹಿತ (83)ರನ್ ಹಾಗೂ ಅಂಜಿಕ್ಯಾ ರಹಾನೆ (37) ರನ್ ಗಳಿಸಿ ಉತ್ತಮ ರನ್ ಕಲೆ ಹಾಕಿದರು, ನಂತರ ಬಂದ ಶಿವಂ ದುಬೆ ಐದು ಸಿಕ್ಸರ್ ಹಾಗೂ ಎರಡು ಬೌಂಡರಿ ಸಹಿತ ಭರ್ಜರಿ (52) ರನ್ ಗಳಿಸಿದರೆ ರಾಯಡು, ಮೊಯಿನ್ ಆಲಿ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು.

ಇಪ್ಪತ್ತು ಓವರುಗಳಲ್ಲಿ 224 ರನ್ ಗೆಲುವಿನ ಗುರಿ ನೀಡಿದರು, ಆರ್ ಸಿಬಿ ಪರವಾಗಿ ಬೌಲಿಂಗ್ ಮಾಡಿದ ಎಲ್ಲಾ ವೇಗಿಗಳು ದುಬಾರಿಯಾದರು.

ಬೃಹತ್ ಮೊತ್ತ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ (6) ಆಕಾಶ್ ಸಿಂಗ್ ಗೆ ವಿಕೆಟ್ ಒಪ್ಪಿಸಿದರು, ಮತ್ತೊಬ್ಬ ಬ್ಯಾಟ್ಸ್‌ಮನ್ ಮಹಿಪಾಲ್ ಲೋಮರ್(0) ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು 15 ರನ್ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಸಂದರ್ಭದಲ್ಲಿ ಜೊತೆಯಾದ ನಾಯಕ ಪಾಫ್ ಡುಪ್ಲೆಸಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (62) ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ (76) ರನ್ ಗಳಿಸುವ ಮೂಲಕ 126 ರನ್ ಜೊತೆಯಾಟ ಆಡಿದರು. ಒಂದು ಹಂತದಲ್ಲಿ ಗೆಲುವಿನ ಹತ್ತಿರ ಕೊಂಡೊಯ್ಯುವ ಪ್ರಯತ್ನ ಮಾಡಿದರು.

ನಂತರ ಹಂತ ಹಂತವಾಗಿ ವಿಕೆಟ್ ಕಳೆದುಕೊಂಡರು, ಚೆನ್ನೈ ತಂಡದ ಪರವಾಗಿ ತುಷಾರ್ ದೇಶಪಾಂಡೆ 3 ವಿಕೆಟ್ ಹಾಗೂ ಮತೀಷಾ ಪ್ರತೀರಾಣ 2 ವಿಕೆಟ್ ಪಡೆದು ಗಮನ ಸೆಳೆದರು, ಅದ್ಭುತವಾದ ಬ್ಯಾಟಿಂಗ್ ಮಾಡಿದ ಡೆವೊನ್ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

21 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago