Categories: ಐಪಿಎಲ್

ತವರಿನಲ್ಲಿ ಆರ್ ಸಿಬಿಗೆ ಆಘಾತ, ಚೆನ್ನೈಗೆ ಭರ್ಜರಿ ಗೆಲುವು!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮಬಲ ಹೋರಾಟದ ಪಂದ್ಯದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಚಿತ್ತಾರ ಮೂಲೆ-ಮೂಲೆಯಲ್ಲೂ ಬಿಡಿಸಿದ್ದರೂ ಕೊನೆಯ ಓವರ್ ನಲ್ಲಿ ಗೆಲುವು ಮಹೇಂದ್ರ ಸಿಂಗ್ ದೋನಿ ನಾಯಕತ್ವದ ಸಿಎಸ್ ಕೆ ಪಾಲಾಯಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಯಶಸ್ವಿ ಆರಂಭಿಕ ಜೋಡಿಯಾದ ಡೇವಿಡ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲು ಬಿಡಲಿಲ್ಲ, ಮೊಹಮ್ಮದ್ ಸಿರಾಜ್ ಅವರ ಮೊದಲ ಓವರ್ ನಲ್ಲಿಯೇ ಗಾಯಕ್ವಾಡ್ (3) ರನ್ ಗಳಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಕಾನ್ವೆ ಆರು ಸಿಕ್ಸರ್ ಹಾಗೂ ಆರು ಬೌಂಡರಿ ಸಹಿತ (83)ರನ್ ಹಾಗೂ ಅಂಜಿಕ್ಯಾ ರಹಾನೆ (37) ರನ್ ಗಳಿಸಿ ಉತ್ತಮ ರನ್ ಕಲೆ ಹಾಕಿದರು, ನಂತರ ಬಂದ ಶಿವಂ ದುಬೆ ಐದು ಸಿಕ್ಸರ್ ಹಾಗೂ ಎರಡು ಬೌಂಡರಿ ಸಹಿತ ಭರ್ಜರಿ (52) ರನ್ ಗಳಿಸಿದರೆ ರಾಯಡು, ಮೊಯಿನ್ ಆಲಿ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು.

ಇಪ್ಪತ್ತು ಓವರುಗಳಲ್ಲಿ 224 ರನ್ ಗೆಲುವಿನ ಗುರಿ ನೀಡಿದರು, ಆರ್ ಸಿಬಿ ಪರವಾಗಿ ಬೌಲಿಂಗ್ ಮಾಡಿದ ಎಲ್ಲಾ ವೇಗಿಗಳು ದುಬಾರಿಯಾದರು.

ಬೃಹತ್ ಮೊತ್ತ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ (6) ಆಕಾಶ್ ಸಿಂಗ್ ಗೆ ವಿಕೆಟ್ ಒಪ್ಪಿಸಿದರು, ಮತ್ತೊಬ್ಬ ಬ್ಯಾಟ್ಸ್‌ಮನ್ ಮಹಿಪಾಲ್ ಲೋಮರ್(0) ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು 15 ರನ್ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಸಂದರ್ಭದಲ್ಲಿ ಜೊತೆಯಾದ ನಾಯಕ ಪಾಫ್ ಡುಪ್ಲೆಸಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (62) ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ (76) ರನ್ ಗಳಿಸುವ ಮೂಲಕ 126 ರನ್ ಜೊತೆಯಾಟ ಆಡಿದರು. ಒಂದು ಹಂತದಲ್ಲಿ ಗೆಲುವಿನ ಹತ್ತಿರ ಕೊಂಡೊಯ್ಯುವ ಪ್ರಯತ್ನ ಮಾಡಿದರು.

ನಂತರ ಹಂತ ಹಂತವಾಗಿ ವಿಕೆಟ್ ಕಳೆದುಕೊಂಡರು, ಚೆನ್ನೈ ತಂಡದ ಪರವಾಗಿ ತುಷಾರ್ ದೇಶಪಾಂಡೆ 3 ವಿಕೆಟ್ ಹಾಗೂ ಮತೀಷಾ ಪ್ರತೀರಾಣ 2 ವಿಕೆಟ್ ಪಡೆದು ಗಮನ ಸೆಳೆದರು, ಅದ್ಭುತವಾದ ಬ್ಯಾಟಿಂಗ್ ಮಾಡಿದ ಡೆವೊನ್ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

8 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

9 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

11 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

12 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

12 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

13 hours ago