ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮಬಲ ಹೋರಾಟದ ಪಂದ್ಯದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಚಿತ್ತಾರ ಮೂಲೆ-ಮೂಲೆಯಲ್ಲೂ ಬಿಡಿಸಿದ್ದರೂ ಕೊನೆಯ ಓವರ್ ನಲ್ಲಿ ಗೆಲುವು ಮಹೇಂದ್ರ ಸಿಂಗ್ ದೋನಿ ನಾಯಕತ್ವದ ಸಿಎಸ್ ಕೆ ಪಾಲಾಯಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಯಶಸ್ವಿ ಆರಂಭಿಕ ಜೋಡಿಯಾದ ಡೇವಿಡ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲು ಬಿಡಲಿಲ್ಲ, ಮೊಹಮ್ಮದ್ ಸಿರಾಜ್ ಅವರ ಮೊದಲ ಓವರ್ ನಲ್ಲಿಯೇ ಗಾಯಕ್ವಾಡ್ (3) ರನ್ ಗಳಿಸಿ ಔಟಾದರು.
ಇಪ್ಪತ್ತು ಓವರುಗಳಲ್ಲಿ 224 ರನ್ ಗೆಲುವಿನ ಗುರಿ ನೀಡಿದರು, ಆರ್ ಸಿಬಿ ಪರವಾಗಿ ಬೌಲಿಂಗ್ ಮಾಡಿದ ಎಲ್ಲಾ ವೇಗಿಗಳು ದುಬಾರಿಯಾದರು.
ಬೃಹತ್ ಮೊತ್ತ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್ಮನ್ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ (6) ಆಕಾಶ್ ಸಿಂಗ್ ಗೆ ವಿಕೆಟ್ ಒಪ್ಪಿಸಿದರು, ಮತ್ತೊಬ್ಬ ಬ್ಯಾಟ್ಸ್ಮನ್ ಮಹಿಪಾಲ್ ಲೋಮರ್(0) ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು 15 ರನ್ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಸಂದರ್ಭದಲ್ಲಿ ಜೊತೆಯಾದ ನಾಯಕ ಪಾಫ್ ಡುಪ್ಲೆಸಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (62) ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ (76) ರನ್ ಗಳಿಸುವ ಮೂಲಕ 126 ರನ್ ಜೊತೆಯಾಟ ಆಡಿದರು. ಒಂದು ಹಂತದಲ್ಲಿ ಗೆಲುವಿನ ಹತ್ತಿರ ಕೊಂಡೊಯ್ಯುವ ಪ್ರಯತ್ನ ಮಾಡಿದರು.
ನಂತರ ಹಂತ ಹಂತವಾಗಿ ವಿಕೆಟ್ ಕಳೆದುಕೊಂಡರು, ಚೆನ್ನೈ ತಂಡದ ಪರವಾಗಿ ತುಷಾರ್ ದೇಶಪಾಂಡೆ 3 ವಿಕೆಟ್ ಹಾಗೂ ಮತೀಷಾ ಪ್ರತೀರಾಣ 2 ವಿಕೆಟ್ ಪಡೆದು ಗಮನ ಸೆಳೆದರು, ಅದ್ಭುತವಾದ ಬ್ಯಾಟಿಂಗ್ ಮಾಡಿದ ಡೆವೊನ್ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…