Categories: ಐಪಿಎಲ್

ತವರಿನಲ್ಲಿ ಆರ್ ಸಿಬಿಗೆ ಆಘಾತ, ಚೆನ್ನೈಗೆ ಭರ್ಜರಿ ಗೆಲುವು!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮಬಲ ಹೋರಾಟದ ಪಂದ್ಯದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಚಿತ್ತಾರ ಮೂಲೆ-ಮೂಲೆಯಲ್ಲೂ ಬಿಡಿಸಿದ್ದರೂ ಕೊನೆಯ ಓವರ್ ನಲ್ಲಿ ಗೆಲುವು ಮಹೇಂದ್ರ ಸಿಂಗ್ ದೋನಿ ನಾಯಕತ್ವದ ಸಿಎಸ್ ಕೆ ಪಾಲಾಯಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಯಶಸ್ವಿ ಆರಂಭಿಕ ಜೋಡಿಯಾದ ಡೇವಿಡ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲು ಬಿಡಲಿಲ್ಲ, ಮೊಹಮ್ಮದ್ ಸಿರಾಜ್ ಅವರ ಮೊದಲ ಓವರ್ ನಲ್ಲಿಯೇ ಗಾಯಕ್ವಾಡ್ (3) ರನ್ ಗಳಿಸಿ ಔಟಾದರು.

ಈ ಸಂದರ್ಭದಲ್ಲಿ ಜೊತೆಯಾದ ಕಾನ್ವೆ ಆರು ಸಿಕ್ಸರ್ ಹಾಗೂ ಆರು ಬೌಂಡರಿ ಸಹಿತ (83)ರನ್ ಹಾಗೂ ಅಂಜಿಕ್ಯಾ ರಹಾನೆ (37) ರನ್ ಗಳಿಸಿ ಉತ್ತಮ ರನ್ ಕಲೆ ಹಾಕಿದರು, ನಂತರ ಬಂದ ಶಿವಂ ದುಬೆ ಐದು ಸಿಕ್ಸರ್ ಹಾಗೂ ಎರಡು ಬೌಂಡರಿ ಸಹಿತ ಭರ್ಜರಿ (52) ರನ್ ಗಳಿಸಿದರೆ ರಾಯಡು, ಮೊಯಿನ್ ಆಲಿ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು.

ಇಪ್ಪತ್ತು ಓವರುಗಳಲ್ಲಿ 224 ರನ್ ಗೆಲುವಿನ ಗುರಿ ನೀಡಿದರು, ಆರ್ ಸಿಬಿ ಪರವಾಗಿ ಬೌಲಿಂಗ್ ಮಾಡಿದ ಎಲ್ಲಾ ವೇಗಿಗಳು ದುಬಾರಿಯಾದರು.

ಬೃಹತ್ ಮೊತ್ತ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ (6) ಆಕಾಶ್ ಸಿಂಗ್ ಗೆ ವಿಕೆಟ್ ಒಪ್ಪಿಸಿದರು, ಮತ್ತೊಬ್ಬ ಬ್ಯಾಟ್ಸ್‌ಮನ್ ಮಹಿಪಾಲ್ ಲೋಮರ್(0) ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು 15 ರನ್ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಸಂದರ್ಭದಲ್ಲಿ ಜೊತೆಯಾದ ನಾಯಕ ಪಾಫ್ ಡುಪ್ಲೆಸಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ (62) ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸವೆಲ್ ಮೂರು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ (76) ರನ್ ಗಳಿಸುವ ಮೂಲಕ 126 ರನ್ ಜೊತೆಯಾಟ ಆಡಿದರು. ಒಂದು ಹಂತದಲ್ಲಿ ಗೆಲುವಿನ ಹತ್ತಿರ ಕೊಂಡೊಯ್ಯುವ ಪ್ರಯತ್ನ ಮಾಡಿದರು.

ನಂತರ ಹಂತ ಹಂತವಾಗಿ ವಿಕೆಟ್ ಕಳೆದುಕೊಂಡರು, ಚೆನ್ನೈ ತಂಡದ ಪರವಾಗಿ ತುಷಾರ್ ದೇಶಪಾಂಡೆ 3 ವಿಕೆಟ್ ಹಾಗೂ ಮತೀಷಾ ಪ್ರತೀರಾಣ 2 ವಿಕೆಟ್ ಪಡೆದು ಗಮನ ಸೆಳೆದರು, ಅದ್ಭುತವಾದ ಬ್ಯಾಟಿಂಗ್ ಮಾಡಿದ ಡೆವೊನ್ ಕಾನ್ವೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

12 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago