Categories: ರಾಜ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ- ಮಧ್ಯವರ್ತಿಗಳನ್ನ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು- ಸಿಎಂ ಸಿದ್ದರಾಮಯ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

6 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

10 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

13 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

14 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago