Categories: ರಾಜ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ- ಮಧ್ಯವರ್ತಿಗಳನ್ನ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು- ಸಿಎಂ ಸಿದ್ದರಾಮಯ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

3 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

4 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

9 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

11 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

14 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

15 hours ago